ಮಂಗಳೂರು ವಿಶ್ವವಿದ್ಯಾಲಯದ ಪಿ.ಎಚ್.ಡಿ ಪದವಿ

ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸ್ವಾತಿ ಕೆ ಅವರು “A²TM: Algorithms for Authentication of Digital Transactions based on Multi-biometrics” ಎಂಬ ವಿಷಯದ ಮೇಲೆ ಸಲ್ಲಿಸಿರುವ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನ ಮಾಡಿದೆ.
ಇವರು ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಬಿ. ಎಚ್. ಶೇಖರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿರುತ್ತಾರೆ.
ಕೆ. ಚಂದ್ರಶೇಖರ ರಾವ್ ಮತ್ತು ಜಯಂತಿ ಕೆ ಅವರ ಪುತ್ರಿ, ಹಾಗೂ ನಂದ ಕಿಶೋರ್ ಕೆ ಅವರ ಪತ್ನಿಯಾಗಿರುವ ಡಾ. ಸ್ವಾತಿ. ಕೆ. ಇವರಿಗೆ ಶ್ರೀ ಭುವನೇಂದ್ರ ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಂಸ್ಥೆ ಗೌರವದ ಅಭಿನಂದನೆಗಳನ್ನು ತಿಳಿಸುತ್ತಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ ಎ. ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






















































