
ಮೈಸೂರು : ಶಿಕ್ಷಣದಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರುವ ಸರ್ಕಾರದ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಲವರ ವಿರೋಧ ಇದ್ದರೂ, ಎಲ್ಲಾ ಅಂಶಗಳನ್ನು ಪರಿಶೀಲಿಸಿ ಈ ತೀರ್ಮಾನ ಕೈಗೊಂಡಿದ್ದೇವೆ.
ಈ ಶೈಕ್ಷಣಿಕ ವರ್ಷದಿಂದಲೇ ಪರೀಕ್ಷೆಯಲ್ಲಿ ದ್ವಿಭಾಷಾ ನೀತಿ ಜಾರಿಯಾಗಲಿದೆ ಎಂದು ತಿಳಿಸಿದ ಅವರು, ಹಿಂದಿ ಕಲಿಯುವುದನ್ನು ವಿರೋಧಿಸುವುದಿಲ್ಲ ಆದರೆ ಅದನ್ನು ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿ ಯಾವುದೇ ಭಾಷೆಯನ್ನು ಬಲವಂತವಾಗಿ ಹೇರಬಾರದು ಎಂಬುದು ತಮ್ಮ ನಿಲುವು ಎಂದರು.
ಇದೇ ವೇಳೆ ಐಪಿಎಲ್ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಶಾಸಕರಿಗೆ ಬೇಡಿಕೆಯಂತೆ ಎರಡು ಟಿಕೆಟ್ ನೀಡಲಾಗಿದೆ ಎಂದರು. ತಮಗೆ ಕ್ರಿಕೆಟ್ ಇಷ್ಟವಿದ್ದರೂ, ಚುನಾವಣಾ ಕೆಲಸಗಳ ಹಿನ್ನೆಲೆಯಲ್ಲಿ 9ರವರೆಗೆ ಯಾವುದೇ ಪಂದ್ಯ ವೀಕ್ಷಿಸುವುದಿಲ್ಲ ಎಂದು ಹೇಳಿದರು.






















































