
ಬೆಂಗಳೂರು : ಈ ಹಿಂದೆ ನೀಡಿದ ಫಲಿತಾಂಶದ ದಿನಾಂಕಗಳ ಪ್ರಕಾರ, ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಳ್ಳುವ ಸಾಧ್ಯತೆ ಇತ್ತು.
ಆದರೆ ಇದೀಗ ಏಪ್ರಿಲ್ 8 ಅಥವಾ ಏಪ್ರಿಲ್ 9 ರ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ 9ರಂದು ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು ಈ ಕಾರಣದಿಂದಲೂ ಫಲಿತಾಂಶ ಪ್ರಕಟಣೆಯ ದಿನಾಂಕ ಮುಂದೂಡಿಕೆಯ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈ ಕುರಿತು ಶಿಕ್ಷಣ ಇಲಾಖೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ . ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗುವ ಮಾಹಿತಿಗಳನ್ನು ಮಾತ್ರ ಅನುಸರಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.








