ಏಪ್ರಿಲ್ 15ರಂದು ಕಾರ್ಕಳದಲ್ಲಿ ಹಸಿರು ಹೊರೆ ಕಾಣಿಕೆಯ ಪೂರ್ವಭಾವಿ ಸಮಾಲೋಚನಾ ಸಭೆ

ಕಾರ್ಕಳ: ಏಪ್ರಿಲ್ 15 ಬುಧವಾರದಂದು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಪಡುಬಿದ್ರಿಯಲ್ಲಿ ಜೀರ್ಣೋದ್ಧಾರ ಸಮಿತಿಯು “ಹಸಿರುವಾಣಿ ಹೊರೆ ಕಾಣಿಕೆ”ಯ ಪೂರ್ವಭಾವಿ ಸಮಲೋಚನಾ ಸಭೆ ಆಯೋಜಿಸಿದೆ.
ಈ ಸಭೆ ಬುಧವಾರ ಸಂಜೆ 4 ಗಂಟೆಗೆ ಕಾರ್ಕಳ ಪ್ರಕಾಶ್ ಹೋಟೆಲ್ನಲ್ಲಿ ನಡೆಯಲಿದ್ದು, ದೇವಸ್ಥಾನದ ಕಾರ್ಯಕ್ರಮಗಳ ಸಿದ್ಧತೆ ಹಾಗೂ ವ್ಯವಸ್ಥೆಗಳ ಕುರಿತು ಚರ್ಚೆ ನಡೆಯಲಿದೆ.
ಈ ಸಭೆಯಲ್ಲಿ ಆಸಕ್ತ ಭಕ್ತರು, ಸೇವಾ ಮನೋಭಾವದವರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.











