30.7 C
Udupi
Wednesday, May 27, 2026
spot_img
spot_img
HomeBlogಮಂಗಳೂರು ಆಮಂತ್ರಣ ಸಂಸ್ಥೆಯ ಪದಪ್ರದಾನ ಸಮಾರಂಭ ಸಂಪನ್ನ

ಮಂಗಳೂರು ಆಮಂತ್ರಣ ಸಂಸ್ಥೆಯ ಪದಪ್ರದಾನ ಸಮಾರಂಭ ಸಂಪನ್ನ

ಮಂಗಳೂರು: ರಾಜ್ಯದಾದ್ಯಂತ ಅಪಾರ ಸಂಖ್ಯೆಯ ಸದಸ್ಯರನ್ನು ಹೊಂದಿ, ಸಾಂಸ್ಕೃತಿಕ ಹಾಗೂ ಸಾಮಾಜಿಕ ವಲಯದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಸಂಸ್ಥೆಯು ಇದೀಗ ಮಂಗಳೂರು ತಾಲೂಕಿಗೆ ಹೆಜ್ಜೆ ಇಟ್ಟಿದೆ.
24 ಮೇ 2026 ರ ಭಾನುವಾರದಂದು ಮಂಗಳೂರಿನ ನಂತೂರಿನ ಸಂದೇಶ ಸಭಾಭವನದಲ್ಲಿ ನಡೆದ ಭವ್ಯ ವೇದಿಕೆಯಲ್ಲಿ, ಗಣ್ಯರ ಸಮ್ಮುಖದಲ್ಲಿ ಮಂಗಳೂರು ತಾಲೂಕು ಮಟ್ಟದ ಪದಪ್ರದಾನ ಹಾಗೂ ಕಲಾ ಸಂಭ್ರಮ ಸಮಾರಂಭ ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಸಾಹಿತಿ ಭುವನೇಶ್ವರಿ ಹೆಗಡೆ, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಹಿರಿಯ ಮುತ್ಸದ್ದಿ ಬಿ. ಭುಜಬಲಿ ಧರ್ಮಸ್ಥಳ, ಮೆಸ್ಕಾಂ ಸಹಾಯಕ ಇಂಜಿನೀಯರ್ ರಾಜೇಶ್ ಇವರು ವೇದಿಕೆಯಲ್ಲಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಪ್ರೊ. ಭುವನೇಶ್ವರಿ ಹೆಗಡೆ, ಹಿರಿಯ ಸಾಹಿತಿಗಳು, ಮಂಗಳೂರು ನೆರವೇರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಆಮಂತ್ರಣ ವೇದಿಕೆಯ ಅಧ್ಯಕ್ಷೆ ಶ್ರೀಮತಿ ವಿಂದ್ಯಾ ಎಸ್. ರೈ ಕಡೇಶಿವಾಲಯ, ಅಧ್ಯಕ್ಷೀಯ ಭಾಷಣ ಮಾಡಿದರು. ವಿಜಯ ಕುಮಾರ್ ಜೈನ್, ಸಂಚಾಲಕರು, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಪ್ರಧಾನ ನೆರವೇರಿಸಿ ಕೊಟ್ಟರು ಮತ್ತು ಸಂಸ್ಥೆಯ ಧ್ಯೇಯ ಉದ್ದೇಶ ವಿವರಿಸಿದರು.
ಎಕ್ಸೆಲ್ ಸಮೂಹ ಸಂಸ್ಥೆ ಗುರುವಾಯನಕೆರೆ ಇದರ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿ ಕಲೆ ಸಾಹಿತ್ಯ ಸಂಸ್ಕೃತಿಯ ಮಹತ್ವ ಮತ್ತು ಅಗತ್ಯವನ್ನು ಒತ್ತಿ ಹೇಳಿದರು. ಹಿರಿಯ ಶ್ರೀ ಬಿ. ಭುಜಬಲಿ, ಹಿರಿಯ ಮುತ್ಸದ್ದಿ, ಸಾಹಿತ್ಯ ಪ್ರೇಮಿ, ಹಾಗೂ ಮಲ್ಲಿನಾಥ್ ಜೈನ್ ಧರ್ಮಸ್ಥಳ, ದ.ಕ ಜಾನಪದ ಪರುಷತ್ ಅಧ್ಯಕ್ಷರಾದ ಪ್ರವೀಣ್ ಕೊಡಿಯಾಲ್ ಬೈಲ್ , ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಟ್ಟದ ಭಾಗೀರಥಿ ಖ್ಯಾತಿಯ ಸಾಹಿತಿ ಭುವನೇಶ್ವರಿ ಹೆಗಡೆಯವರಿಗೆ, ಎಕ್ಸೆಲ್ ಸುಮಂತ್ ಕುಮಾರ್ ಜೈನ್ ಅವರನ್ನು ಮತ್ತು ಶಿಕ್ಷಣ ಪ್ರೇಮಿ, ಕಿತ್ತಳೆ ಹರೇಕಳ ಹಾಜಬ್ಬರನ್ನು ಹಾಗೂ ಆಮಂತ್ರಣ ಉಯ್ಯಾಲೆ ತಂಡದ ಅಧ್ಯಕ್ಷೆ ಸೌಮ್ಯ ತಿಲಕ್ ಶೆಟ್ಟಿ ಮಿಜಾರು, ಯುಗಾದಿ ಬಳಗದ ಸಂಸ್ಥಾಪಕ ಶ್ರೀನಾಗ್ ಹೊನ್ನಾವರ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಡಾ.ಅರುಣಾ ನಾಗರಾಜ್,ಮಾ| ಅಭಿಷೇಕ್ ಪ್ರಭು,ಕುಮಾರಿ ಶ್ರೇಯಾ ಮುರ್ಕಜೆ,ಮಾ.ಪ್ರಧಯ್ ಕಿರಣ್ ಶೆಣೈ,ಮಾ.ಪ್ರೀತಮ್ ಜಿ.ಪೂಜಾರಿ, ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆಮಂತ್ರಣ ದೇವರ ಮಕ್ಕಳು ಪುಸ್ತಕವನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಯ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿ,ವಿದ್ಯಾಶ್ರೀ ಅಡೂರು ಇವರ ಕವಿತೆಯೆಂಬ ಕೇದಗೆ ಧ್ವನಿ ಮುದ್ರಣ ಲೋಕಾರ್ಪಣೆ ಮಾಡಿದರು.

ಸಮಾರಂಭದಲ್ಲಿ ಆಮಂತ್ರಣ ರಾಜ್ಯ ನಿರ್ದೇಶಕರಾದ ಆಶಾ ಅಡೂರು, ಉಮಾ ಸುನಿಲ್ ಹಾಸನ ಹಾಗೂ ಜಿಲ್ಲಾ ನಿರ್ದೇಶಕರಾದ ಚೇತನ್ ಅಮೈ, ರಾಕೇಶ್ ಪೊಳಲಿ, ವಿಶಾಲಾಕ್ಷಿ ಹೆಗ್ಡೆ ಮಿಜಾರು, ರಂಜನ್ ಕುಮಾರ್ ನೆರಿಯ, ಅನ್ನಪೂರ್ಣ ಕಿರಣ್ ಅಂಬಲಪಾಡಿ ಉಡುಪಿ, ಶೋಭ ದಿನೇಶ್ ಉದ್ಯಾವರ ಜಿಲ್ಲಾ ಅಧ್ಯಕ್ಷರಾದ ಪುಷ್ಪಪ್ರಸಾದ್, ಚಿಕ್ಕಮಗಳೂರು ಜಿಲ್ಲಾಧ್ಯಕ್ಷೆ ಅಮಿತಾ ಶಮಂತ್, ಮುಂಬಯಿ ವೇದಿಕೆಯ ಅಧ್ಯಕ್ಷೆ ಸರ್ವಮಂಗಳ ಶೆಟ್ಟಿ, ಬಂಟ್ವಾಳ ತಾಲೂಕುವಾಧ್ಯಕ್ಷೆ ರಶ್ಮಿತಾ ಸುರೇಶ್ ಜೋಗಿಬೆಟ್ಟು, ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ವಿದ್ಯಾಶ್ರೀ ಅಡೂರು,ಮೂಡುಬಿದಿರೆ ಅಧ್ಯಕ್ಷೆ ಕವಿತಾ ದಿನೇಶ್,ಬ್ರಹ್ಮಾವರ ಅಧ್ಯಕ್ಷೆ ಸುಮಾ ಕಿರಣ್ ಬಸ್ರೂರು, ಪುತ್ತೂರು ಅಧ್ಯಕ್ಷೆ ಆಶಾ ಮಯ್ಯ, ಪ್ರಕಾಶ್ ಆಚಾರ್ಯ, ಪ್ರಸಾದ್ ನಾಯಕ್ ಕಾರ್ಕಳ,ಧನರಾಜ್ ಆಚಾರ್ಯ, ಕಲಾ ಪ್ರತಿಭೆಯ ವಿಜಯ ಮುಂಡ್ಲಿ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು.

ಲತೇಶ್ ಪುತ್ರನ್, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಅಧ್ಯಕ್ಷರಾಗಿ ಪದ ಪ್ರದಾನ ಪಡೆದುಕೊಂಡರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್, ಮಂಗಳೂರು ಆಮಂತ್ರಣ ವೇದಿಕೆಯ ಅಧ್ಯಕ್ಷರಾದ ಲತೇಶ್ ಪುತ್ರನ್, ಕಾರ್ಯದರ್ಶಿ ಕಸ್ತೂರಿ ಜಯರಾಮ್, ಉಪಾಧ್ಯಕ್ಷರಾದ ಡೊಂಬಯ್ಯ ಇಡ್ಕಿದು, ಜೊತೆ ಕಾರ್ಯದರ್ಶಿ ರೂಪಕಲಾ ಭಟ್, ಸಾಂಸ್ಕೃತಿಕ ಕಾರ್ಯದರ್ಶಿ ಚೇತನಾ, ಕೋಶಾಧಿಕಾರಿ ಎನ್ ನಾಗೇಂದ್ರ, ನಿರ್ದೇಶಕರಾದ ಅನಿತಾ ಶೆಣೈ ಮತ್ತು ರಶ್ಮಿ ಸನಿಲ್, ರೋನಿ ಕ್ರಾಸ್ತ ,ಕು.ನಿರೀಕ್ಷಿತಾ ಪದಸ್ವೀಕಾರ ಮಾಡಿ ನೂತನ ಜವಾಬ್ದಾರಿಯಿಂದ ಆಮಂತ್ರಣ ಸಾಹಿತ್ಯ ವೇದಿಕೆಯನ್ನು ಮಂಗಳೂರಿನಲ್ಲಿ ಮುನ್ನಡೆಸಲು ವಿವಿಧ ಜವಾಬ್ದಾರಿ ಹಂಚಿಕೊಂಡರು.
ಸಭಾ ಕಾರ್ಯಕ್ರಮದ ಕೊನೆಯಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು.
ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಿಸಲಾಯಿತು. ಬೆಳಗಿನ ಹೊತ್ತು ಮತ್ತು ಮಧ್ಯಾಹ್ನದ ಹೊತ್ತು ಸವಿ ಭೋಜನದ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು.

ಡಾ.ಪ್ರಿಯ ಹರೀಶ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಕಸ್ತೂರಿ ಜಯರಾಮ್ ಕಾವೂರು ಸಹಕರಿಸಿದರು.
ಅಧ್ಯಕ್ಷರಾದ ಲತೇಶ್ ಪುತ್ರನ್ ಸ್ವಾಗತಿಸಿದರು.
ಉಪಾಧ್ಯಕ್ಷ ಡೊಂಬಯ್ಯ ಇಡ್ಕಿದು ಧನ್ಯವಾದ ಸಲ್ಲಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page