ವಿದ್ಯಾರ್ಥಿಗಳು ದೇಶದ ಏಕತೆ, ಶಾಂತಿ ,ಅಭಿವೃದ್ಧಿಗೆ ಶ್ರಮಿಸಬೇಕು: ನಿವೃತ್ತ ಮೇಜರ್ ಜನರಲ್ ಎಂ.ವಿ. ಭಟ್

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 80ನೇ
ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅಭ್ಯಾಗತರಾಗಿ
ಆಗಮಿಸಿದ ನಿವೃತ್ತ ಮೇಜರ್ ಜನರಲ್ ಎಂ.ವಿ. ಭಟ್
ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ,ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು,
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ
ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು
ಸ್ಮರಿಸಿದರು. ದೇಶ ಸೇವೆ ಮಾಡಲು ಸೈನ್ಯದಲ್ಲಿ ಇರುವ
ವಿವಿಧ ಅವಕಾಶಗಳ ಬಗ್ಗೆ ತಿಳಿಸಿ,ವಿದ್ಯಾರ್ಥಿಗಳು ದೇಶದ
ಏಕತೆ, ಶಾಂತಿ ಮತ್ತು ಅಭಿವೃದ್ಧಿಗೆ ತಮ್ಮದೇ ಆದ
ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಕಾರ್ಗಿಲ್
ವಿಜಯದ ಸಾಕ್ಷ್ಯಚಿತ್ರವನ್ನು
ಪ್ರಸ್ತುತಪಡಿಸಲಾಯಿತು ವಿದ್ಯಾರ್ಥಿಗಳಿಂದ
ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರುವ
ದೇಶಭಕ್ತಿ ಗೀತೆ, ನೃತ್ಯ ಹಾಗೂ ಸಾಂಸ್ಕೃತಿಕ
ಕಾರ್ಯಕ್ರಮಗಳು ನಡೆದವು.
ವೇದಿಕೆಯಲ್ಲಿ ಸುಬೇದಾರ್ ಉಮೇಶ್ ನಾಯ್ಕ್,
ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ
ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು,
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ
ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಕಳ ಜ್ಞಾನಸುಧಾ
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ
ದಿನೇಶ್ ಎಂ.ಕೊಡವೂರು, ಕಾರ್ಕಳ ಜ್ಞಾನಸುಧಾ
ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ
ಪ್ರಾಂಶುಪಾಲೆಯಾಗಿರುವ ವಾಣಿ.ಕೆ. ಕಾರ್ಕಳ
ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪ
ಪ್ರಾಂಶುಪಾಲರುಗಳಾಗಿರುವ ಸಾಹಿತ್ಯ, ಉಷಾ ರಾವ್.ಯು,ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿರುವ ಶ್ರೀಮತಿ
ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಮನೀಷ್ ಕುಮಾರ್ ಪ್ರಾರ್ಥಿಸಿ,
ಪಾರ್ಥಚಿರಂತನ ಸ್ವಾತಂತ್ರ್ಯದ ಸಂದೇಶವನ್ನು ಸಾರಿ,
ಸಹಶಿಕ್ಷಕಿ ಕುಮಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿ
ವಂದಿಸಿದರು.














































































































