
ಉಡುಪಿ: ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯೆ ಸುಪ್ರಿಯ ಶೆಟ್ಟಿ ಅವರ ಪತಿ, ಉದ್ಯಮಿ ಕುಶಲ ಶೆಟ್ಟಿ (63) ಅವರು ಸೆಪ್ಟೆಂಬರ್ 6ರಂದು ಮುಂಬೈ ರೈಲ್ವೆ ನಿಲ್ದಾಣದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಉಡುಪಿ ತಾಲೂಕಿನ ಕಡೆಕಾರ್ ಮೂಲದವರಾದ ಕುಶಲ ಶೆಟ್ಟಿ ಅವರು ಮುಂಬೈನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕುಶಲ ಶೆಟ್ಟಿ ಅವರ ಅಂತ್ಯಸಂಸ್ಕಾರ ಸೋಮವಾರ ಸಂಜೆ ಉಡುಪಿ ಕಡೆಕಾರಿನ ನಿವಾಸದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.




































