“ಅರಣ್ಯ ಹಕ್ಕು ಪತ್ರ ಫಲಾನುಭವಿಗಳ ಹಕ್ಕೋತ್ತಾಯಗಳಿಗೆ ಸ್ಪಂದಿಸಿ” – ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಅರಣ್ಯ ಹಕ್ಕು ಪತ್ರ ಫಲಾನುಭವಿಗಳ ಹಕ್ಕೋತಾಯಗಳಿಗೆ ಸ್ಪಂದಿಸಿ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ತಿಳಿಸಿದ್ದಾರೆ.
ಅರಣ್ಯ ಹಕ್ಕುಪತ್ರ ಫಲಾನುಭವಿಗಳಿಗೆ ಬೆಳೆ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು. ಸಹಕಾರಿ ಸಂಘಗಳ ಮೂಲಕ ಬಡ್ಡಿ ಸಹಾಯಧನ, ಬೆಳೆ ಸಾಲ ಹಾಗೂ ಕೃಷಿ ಸಾಲ ಸೌಲಭ್ಯಗಳನ್ನು ಸುಲಭವಾಗಿ ಒದಗಿಸಬೇಕು. ಅರಣ್ಯ ಹಕ್ಕುಪತ್ರ ಪಡೆದಿರುವ ರೈತರಿಗೆ ಕೇವಲ ಹಕ್ಕುಪತ್ರ ನೀಡುವುದಷ್ಟೇ ಅಲ್ಲ, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಖಾತ್ರಿಪಡಿಸಬೇಕು .ಅರಣ್ಯ ಹಕ್ಕುಪತ್ರ ಫಲಾನುಭವಿಗಳ ಹಕ್ಕುಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಇವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.




































