
ನವದೆಹಲಿ: ಸರ್ಕಾರಿ ಸ್ವಾಮ್ಯದಲ್ಲಿರುವ ತೈಲ ಕಂಪನಿಗಳು ನಕಲಿ ಬಳಕೆದಾರರನ್ನು ಪತ್ತೆ ಹಚ್ಚಲು ಎಲ್ಪಿಜಿಗೂ ಗ್ರಾಹಕರ ಆಧಾರ್ ಜೋಡಣೆ ಮಾಡಲು ನಿರ್ಧಾರ ಕೈಗೊಂಡಿದೆ.
ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತನ್ನ ಟ್ವೀಟರ್ ಖಾತೆಯಲ್ಲಿ ‘ವಾಣಿಜ್ಯ ಸಿಲಿಂಡರ್ ಬಳಕೆದಾರರು ಪ್ರಮುಖವಾಗಿ ಅಡುಗೆ ಅನಿಲವನ್ನು ಬುಕ್ ಮಾಡುತ್ತಿದ್ದಾರೆ. ಆದ್ದರಿಂದ ಕಾನೂನುಬದ್ಧವಾಗಿ ನೋಂದಾಯಿಸಿಕೊಂಡ ಗ್ರಾಹಕರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಎಲ್ಪಿಜಿ ಗ್ರಾಹಕರಿಗೆ ಆಧಾರ್ ಆಧಾರಿತ ಇ-ಕೆವೈಸಿ ದೃಢೀಕರಣ ನಡೆಸಲಾಗುತ್ತದೆ. ಇದರಿಂದ ನಕಲಿ ಬಳಕೆದಾರರನ್ನು ಪತ್ತೆ ಹಚ್ಚಿ ಅವರನ್ನು ತೆಗೆದು ಹಾಕಲು ಸಹಾಯವಾಗಲಿದೆ. ಈ ಆಧಾರ್ ಜೋಡಣೆ ಪ್ರಕ್ರಿಯೆ 8 ತಿಂಗಳಿಗಿಂದ ಹೆಚ್ಚು ಕಾಲ ಜಾರಿಯಲ್ಲಿರಲಿದೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.





