ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ಪ್ರಧಾನಿ ಮಾತು

ಕಾರ್ಗಿಲ್: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಸೈನಿಕರು ಮಾಡಿದ ತ್ಯಾಗ ಅಮರವಾಗಿದೆ. ಕಾರ್ಗಿಲ್ ವಿಜಯ ದಿವಸ್ ರೂಪದಲ್ಲಿ ಅದು ಸದಾ ನೆನಪಿನಲ್ಲಿ ಉಳಿಯಲಿದೆ ಎಂದು ತಿಳಿಸಿದರು.
ಪಾಕಿಸ್ತಾನವು ಇತಿಹಾಸದಿಂದ ಯಾವುದೇ ಪಾಠವನ್ನು ಕಲಿತಿಲ್ಲ. ಅದು ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ. ಪಾಕಿಸ್ತಾನವು ದುಸ್ಸಾಹಸ ನಡೆಸಿದ ಆಗಲಿಲ್ಲ ಸೋಲನ್ನು ಕಂಡಿದೆ ಎಂದು ಪಾಕ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ. ಬಳಿಕ ಅವರು ಹಿಮಾಚಲ ಪ್ರದೇಶ ಮತ್ತು ಲಡಾಕ್ ನಡುವೆ ಹವಾಮಾನದಲ್ಲೂ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿರುವ ಸುರಂಗ ನಿರ್ಮಾಣಕ್ಕಾಗಿ ಮೊದಲ ಸ್ಪೋಟ ನಡೆಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.











