
ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12ರ ವರೆಗೆ ಸಾಧಾರಣ ಮಳೆಯಾಗಲಿದೆ. ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಎಚ್ಚರಿಸಿದೆ. ಉಡುಪಿ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಲ್ಲಿ ಕೊಂಚ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.













