
ಉಡುಪಿ : ಬಾಂಗ್ಲಾದೇಶದಲ್ಲಿ ಉದ್ದೇಶಪೂರ್ವಕವಾಗಿ ಹಿಂದುಗಳನ್ನು ಗುರಿ ಮಾಡಲಾಗುತ್ತಿದ್ದು ಅವರನ್ನು ಬಹಿರಂಗವಾಗಿ ಹತ್ಯೆ ಮಾಡುವುದು, ಹಿಂದೂಗಳ ಮನೆಯ ಮೇಲೆ ದಾಳಿ ಮಾಡುವುದು, ಹಿಂದೂಗಳ ಅಂಗಡಿಗಳನ್ನು ಲೂಟಿ ಮಾಡುವುದು, ಹಿಂದೂಗಳ ದೇವಸ್ಥಾನಗಳು ಧ್ವಂಸಗೊಳಿಸುವುದು, ಬೆಂಕಿ ಹಚ್ಚುವುದು, ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರ ಮಾಡುವುದು, ಹಿಂದೂಗಳನ್ನು ಸ್ಥಳಾಂತರಿಸುವುದು ಮುಂತಾದ ದೌರ್ಜನ್ಯಗಳು ನಡೆಯುತ್ತಿವೆ . ಇದರಿಂದಾಗಿ ಅಲ್ಲಿಯ ಅಲ್ಪಸಂಖ್ಯಾತ ಹಿಂದೂಗಳಲ್ಲಿ ಭಯದ ವಾತಾವರಣ ಉದ್ಭವಿಸಿದೆ.

ಈ ಬಗ್ಗೆ ನಮ್ಮ ಭಾರತ ಸರಕಾರ ಮಧ್ಯಸ್ಥಿಕೆ ವಹಿಸಿ ಬಾಂಗ್ಲಾದೇಶದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕೆಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಎಲ್ಲಾ ತಾಲೂಕುಗಳ ತಹಶೀಲ್ದಾರರ ಮೂಲಕ ಪ್ರಧಾನ ಮಂತ್ರಿಗಳಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.














