ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ, ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ಡಾ! ವಿ.ಎಸ್. ಆಚಾರ್ಯ ಸ್ಕೌಟ್ಸ್ ಹಾಗೂ ಗೈಡ್ಸ್ ತರಬೇತಿ ಕೇಂದ್ರ, ಪ್ರಗತಿನಗರ ಉಡುಪಿ ಜಿಲ್ಲೆ ಇಲ್ಲಿ ದಿನಾಂಕ 10/9/2026 ರಂದು ಭಾರತ ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಸ್ಕೌಟ್ಸ್ ತಂಡವು ದ್ವಿತೀಯ ಬಹುಮಾನವನ್ನು ಪಡೆದಿರುತ್ತದೆ.
ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಶುಭ ಹಾರೈಸಿದ್ದಾರೆ.




































