ಆ. 28 “ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ”

ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಘಟಕ ಕಾರ್ಕಳ ಆಶ್ರಯದಲ್ಲಿ
ಸಮಾಜದಲ್ಲಿನ ಅಜ್ಞಾನ ಅಂಧಕಾರವನ್ನು ಹೋಗಲಾಡಿಸಲು ಆದ್ಯಾತ್ಮದ ಮೂಲಕ ಶ್ರಮಿಸಿ, ಶಿಕ್ಷಣದ ಮಹತ್ವವನ್ನು ಸಾರಿದ ಸಮಾನತೆಯ ಹರಿಕಾರ ಶೋಷಿತರ ಪಾಲಿಗೆ ಬೆಳಕಾಗಿರುವ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಗಸ್ಟ್ 28 ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದೆ.
ಈ ಸಭೆಯಲ್ಲಿ ಸಮಾಜದಲ್ಲಿ ವಿಶೇಷ ಸಾಧನೆ ಮಾಡಿದ 11 ಜನ ಹಿಂದುಳಿದ ವರ್ಗದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.





















































































