ಕುಮಾರಿ ಚಿಂತನ ಹೆಗಡೆ ಮಾಳಕೋಡ್ ಇವರಿಂದ ಯಕ್ಷಗಾನ ನಾಟ್ಯ ವೈಭವ

ಕಾರ್ಕಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಕಳ ಶಾಖೆ, ಕಾರ್ಕಳ ತಾಲೂಕು ವತಿಯಿಂದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 20ರಂದು ನಡೆಯಲಿದೆ.
ಕಾರ್ಯಕ್ರಮವು ಬೆಳಿಗ್ಗೆ 9:30ರಿಂದ ನೌಕರರ ಭವನ, ಕಾರ್ಕಳದಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 1:30ರಿಂದ 2:30ರವರೆಗೆ ಸರ್ಕಾರಿ ನೌಕರರು ಹಾಗೂ ನೌಕರರ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.
ಮಧ್ಯಾಹ್ನ 2:30ರಿಂದ 4:30ರವರೆಗೆ ಉತ್ತರ ಕನ್ನಡದ ಯಕ್ಷ ಮಾಣಿಕ್ಯ ಕುಮಾರಿ ಚಿಂತನ ಹೆಗಡೆ ಬಳಗದವರಿಂದ ಯಕ್ಷಗಾನ ನಾಟ್ಯ ವೈಭವ ಪ್ರಸ್ತುತಗೊಳ್ಳಲಿದೆ.
ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಕಳ ಶಾಖೆಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕೋರಿದ್ದಾರೆ.































































































































