
ಕಾರ್ಕಳದ ಪ್ರಕಾಶ್ ಹೋಟೆಲ್ ನ ಸಂಭ್ರಮ ಸಭಾಂಗಣದಲ್ಲಿ ನಾಳೆ ಅಪರಾಹ್ನ ೪-೩೦ಕ್ಕೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ನ ರಾಜ್ಯಾದ್ಯಕ್ಷರಾದ ರವೀಂದ್ರ ಶೆಟ್ಟಿ ಬಜಗೋಳಿಯವರು ಉದ್ಘಾಟಿಸಲಿದ್ದಾರೆ.”ಭಾಷಿ ಅಲ್ಲ ಬದ್ಕ್ ” ಎಂಬ ವಿಷಯದ ಕುರಿತು ಕುಂದಗನ್ನಡದ ಖ್ಯಾತ ವಾಗ್ಮಿ ಮನು ಹಂದಾಡಿಯವರು ವಿಶೇಷ ಉಪನ್ಯಾಸವನ್ನು ನಡೆಸಿಕೊಡಲಿದ್ದಾರೆ ಅಧ್ಯಕ್ಷತೆಯನ್ನು ಕಾರ್ಕಳ ಕಸಾಪ ದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ವಹಿಸಲಿದ್ದು ಆಶಯ ಭಾಷಣವನ್ನು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರು ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮೂಡಬಿದ್ರೆ ಸಹಾಯಕ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾದ ಶ್ರೀಧರ ಪಿ ಹಾಗೂ ಗೌರವ ಉಪಸ್ಥಿತಿಯಲ್ಲಿ ನಿವೃತ್ತ ಪುರಸಭಾ ಮುಖ್ಯಾಧಿಕಾರಿ ಗೋಪಾಲ ಕೃಷ್ಣ ಶೆಟ್ಟಿ, ರಂಗ ಸಂಸ್ಕೃತಿಯ ಅಧ್ಯಕ್ಷರಾದ ಎಸ್ ನಿತ್ಯಾನಂದ ಪೈ ಮುಂತಾದವರು ಭಾಗವಹಿಸಲಿದ್ದಾರೆ



































