
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ತಾನು ಆರ್ಎಸ್ಎಸ್ ಚಟುವಟಿಕೆ ನಿಷೇಧಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬಳಿಕ ನನಗೆ ಬೆರದಿಕೆ ಕರೆಗಳು ಬಂದಿದ್ದು ಬಹಳ ಕೆಟ್ಟದ್ದಾಗಿ ಬೈಯ್ದಿದ್ದಾರೆ. ಬಿಜೆಪಿಯವರು ಅದಕ್ಕೆ ದಾಖಲೆ ಕೇಳಿದ್ದು ಹೀಗಾಗಿ ಆರ್ಎಸ್ಎಸ್ ಸಂಸ್ಕೃತಿ ತೋರಿಸುವಂಹತ ಎಡಿಟ್ ಆಗದ 20 ವಿಡಿಯೋ ರಿಲೀಸ್ ಮಾಡಿದ್ದೇನೆ. ಇನ್ನೂ ಕೆಟ್ಟದ್ದಾಗಿ ಬೈದಿರುವ ವಿಡಿಯೋಗಳಿವೆ, ನನ್ನ ಮರ್ಯಾದೆ ಉಳಿಸಿಕೊಳ್ಳಲು ಅವುಗಳನ್ನು ರಿಲೀಸ್ ಮಾಡಿಲ್ಲ ಎಂದು ಹೇಳಿದ್ದಾರೆ.
ಇನ್ನು ಈ ಕುರಿತು ದೂರು ಕೊಡುವ ಬಗ್ಗೆ ಚರ್ಚೆ ಮಾಡಿ, ಗೃಹ ಸಚಿವ ಪರಮೇಶ್ವರ್ ಅವರ ಜೊತೆಯೂ ಮಾತಾಡ್ತೀನಿ. ದೂರು ಕೊಡುವುದು ಸುಲಭ, ಆದ್ರೆ ಆ ವ್ಯಕ್ತಿಗೆ ಶಿಕ್ಷೆ ಆಗುತ್ತೆ, ಆ ಮನಸ್ಥಿತಿ ತುಂಬಿದ ಆರ್ಎಸ್ಎಸ್ಗೆ ಏನು ಶಿಕ್ಷೆ? ಸದ್ಯಕ್ಕೆ ನನ್ನ ಫೋನ್ ಸ್ವಿಚ್ಆಫ್ ಮಾಡಿದ್ದೀನಿ, ಆದರೆ ಅದೇ ಪರಿಹಾರ ಅಲ್ಲ ಎಂದು ತಿಳಿಸಿದ್ದಾರೆ.









