20.7 C
Udupi
Monday, December 22, 2025
spot_img
spot_img
HomeBlogಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ, ಸಿಎಂ ಹಾಗೂ ಡಿಸಿಎಂ ತಪ್ಪು ಯಾವುದೂ ಇಲ್ಲ,...

ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ, ಸಿಎಂ ಹಾಗೂ ಡಿಸಿಎಂ ತಪ್ಪು ಯಾವುದೂ ಇಲ್ಲ, ಗುಪ್ತಚರ ವೈಫಲ್ಯ ಆಗಿದೆ: ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು : ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಘಟನೆಯಲ್ಲಿ ತಪ್ಪುಗಳು ಆಗಿರುವುದು ಸತ್ಯ. ಸರ್ಕಾರ ಕೂಡ ತಪ್ಪನ್ನ ಒಪ್ಪಿಕೊಂಡಿದೆ. ಇಂಟಿಲಿಜೆನ್ಸಿ ಫೈಲೂರ್ ಆಗಿದೆ. ನಿರೀಕ್ಷೆ ಮಾಡಿದ್ದಕ್ಕಿಂತ ಅತಿ ಹೆಚ್ಚು ಜನ ಬಂದಿದ್ದಾರೆ. ಹೀಗಾಗಿ, ಇಂತಹ ಘಟನೆ ನಡೆದಿದೆ ಎಂದು ತಿಳಿಸಿದರು.

ಇದರಲ್ಲಿ ಸಿಎಂ ಹಾಗೂ ಡಿಸಿಎಂ ತಪ್ಪು ಯಾವುದೂ ಇಲ್ಲ. ಕಾರ್ಯಕ್ರಮ ಮಾಡಲು ಸರ್ಕಾರದ ಮೇಲೆ ಒತ್ತಡ ಇತ್ತು. ಈ ಒತ್ತಡದ ಕಾರಣಕ್ಕೆ ಕಾರ್ಯಕ್ರಮ ಮಾಡಲಾಗಿತ್ತು. ವಿಧಾನಸೌಧದ ಮುಂದೆ ಮಾಡಿದ ಕಾರ್ಯಕ್ರಮಕ್ಕೆ ಯಾವುದೇ ಲೋಪ ಉಂಟಾಗಿಲ್ಲ. ಅಲ್ಲಿಗೆ ಅತಿ ಹೆಚ್ಚು ಜನ ಬರಲೇ ಇಲ್ಲ. ಸಚಿವರು ಅವರ ಸಂಬಂಧಿಕರು ಕುಟುಂಬಸ್ಥರು ಬಂದಿರಬಹುದು. ಅದರಲ್ಲಿ ಯಾವ ಲೋಪ ಉಂಟಾಗಿಲ್ಲ. ಜನ ಕ್ರಿಕೆಟರ್ ಗಳನ್ನ ನೋಡಲು ಸ್ಟೇಡಿಯಂ ಹೋದರು. ಸಮಾರಂಭ ಮಾಡಿ ಎಂದು ಹೇಳುತ್ತಿದ್ದ ಬಿಜೆಪಿ ಈಗ ಹಿಪೋಕ್ರಸಿ ಪ್ಲೇ ಮಾಡುತ್ತಿದೆ. ಕಾರ್ಯಕ್ರಮ ಆಯೋಜನೆಯಲ್ಲಿ ತಪ್ಪಾಗಿರುವುದು ಸತ್ಯ. ಯಾರು ತಪ್ಪು ಮಾಡಿದ್ದಾರೆ ಎಂಬುದನ್ನ ಪತ್ತೆ ಮಾಡಲು ಮ್ಯಾಜಿಸ್ಟ್ರೇಟ್ ಕಮಿಟಿ ರಚನೆ ಮಾಡಲಾಗಿದೆ. ಈಗಲೇ ಇಂತಹವರೇ ತಪ್ಪಿತಸ್ಥರು ಎಂಬ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page