27.8 C
Udupi
Friday, March 14, 2025
spot_img
spot_img
HomeBlogಆರ್‌ಸಿಬಿ ಸೋಲಿನ ಬೆನ್ನಲೇ ಐಪಿಎಲ್‌ಗೆ ವಿದಾಯ ಹೇಳಿದ ದಿನೇಶ್ ಕಾರ್ತಿಕ್

ಆರ್‌ಸಿಬಿ ಸೋಲಿನ ಬೆನ್ನಲೇ ಐಪಿಎಲ್‌ಗೆ ವಿದಾಯ ಹೇಳಿದ ದಿನೇಶ್ ಕಾರ್ತಿಕ್

ನವದೆಹಲಿ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನ್ನನುಭವಿಸಿದ ಬೆನ್ನಲ್ಲೇ ಆರ್‌ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಐಪಿಎಲ್ ನಿಂದ ವಿದಾಯದ ಸೂಚನೆಯನ್ನು ನೀಡಿದ್ದಾರೆ.

ಪಂದ್ಯ ಮುಗಿಯುತ್ತಿದ್ದಂತೆ ಕಾರ್ತಿಕ್ ಗ್ಲೌಸ್‌ ತೆಗೆದು ಪ್ರೇಕ್ಷಕರತ್ತ ಕೈಬೀಸಿ ಧನ್ಯವಾದ ಅರ್ಪಿಸಿ ಬಳಿಕ ಆಟಗಾರರಿಂದ ಭಾವನಾತ್ಮಕ ಗೌರವ ಪಡೆದುಕೊಂಡರು. ವಿರಾಟ್ ಕೊಹ್ಲಿ ಕಾರ್ತಿಕ್ ಅವರನ್ನು ಅಪ್ಪಿಕೊಂಡು ಕಣ್ಣೀರಿನೊಂದಿಗೆ ಮೈದಾನದಿಂದ ಹೊರನಡೆದರು.

ದಿನೇಶ್ ಕಾರ್ತಿಕ್ 17 ವರ್ಷಗಳ ಐಪಿಎಲ್ ವೃತ್ತಿ ಜೀವನದಲ್ಲಿ ಒಟ್ಟು 6 ತಂಡಗಳ ಪರ ಆಡಿದ್ದು ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಆಗಲಿಲ್ಲ. ಆದರೆ ವೃತ್ತಿ ಜೀವನದ ಕೊನೆಯ ಪಂದ್ಯಾಟದಲ್ಲಿ ಟ್ರೋಫಿ ಗೆಲ್ಲುವ ಕನಸು ಕಂಡಿದ್ದ ದಿನೇಶ್ ಕಾರ್ತಿಕ್ ಅವರ ಕನಸು ಮಾತ್ರ ಕನಸಾಗಿಯೇ ಉಳಿಯುವಂತಾಯಿತು. ಈ ಐಪಿಎಲ್ ತನ್ನ ವೃತ್ತಿಜೀವನದ ಕೊನೆಯ ಸೀಸನ್ ಆಗಲಿದೆ ಎಂದು ಋತುವಿನ ಆರಂಭಕ್ಕೂ ಮುನ್ನ ಕಾರ್ತಿಕ್ ಹೇಳಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page