
ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಯು ನೈರುತ್ಯ ಮುಂಗಾರು ಮುಂದಿನ ಎರಡು-ಮೂರು ದಿನಗಳಲ್ಲಿ ಕೇರಳ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಸಾಮಾನ್ಯವಾಗಿ ಜೂನ್ ಆರಂಭದಲ್ಲಿ ಮುಂಗಾರು ಪ್ರವೇಶವಾಗುತ್ತದೆ. ಅರಬ್ಬಿ ಸಮುದ್ರ, ಲಕ್ಷದ್ವೀಪ, ಕೇರಳ ಹಾಗೂ ತಮಿಳುನಾಡಿನ ಕೆಲವು ಭಾಗಗಳಿಗೆ ಶೀಘ್ರದಲ್ಲೇ ಮಳೆಗಾಲ ವಿಸ್ತರಿಸಲಿದೆ ಎಂದು ಇಲಾಖೆ ಹೇಳಿದೆ.
ಈ ಹಿಂದೆ ಮೇ 26ರ ವೇಳೆಗೆ ಮುಂಗಾರು ಕೇರಳ ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿತ್ತು. ಎಲ್ ನಿನೊ ಪರಿಣಾಮದಿಂದ ಈ ವರ್ಷದ ಮಳೆ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿತ್ತು.
ಜೂನ್ ತಿಂಗಳಲ್ಲಿ ಎಲ್ ನಿನೊ ಪ್ರಭಾವ ಕ್ಷೀಣಿಸಬಹುದಾದರೂ, ಸೆಪ್ಟೆಂಬರ್ ವೇಳೆಗೆ ಮತ್ತೆ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.




























