
ಈ ದೇಶಕಂಡ ಖ್ಯಾತ ಕಾದಂಬರಿಕಾರ, ಸರಸ್ವತಿಯ ವರಪುತ್ರ, ಸರಸ್ವತಿ ಸನ್ಮಾನ್ ಪ್ರಶಸ್ತಿ ವಿಜೇತ ಎಸ್.ಎಲ್ ಭೈರಪ್ಪನವರು ಬದುಕಿನ ಯಾನ ಮುಗಿಸಿ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿನಿಂದ ಕನ್ನಡ ಸಾಹಿತ್ಯದಲ್ಲಿ ನೀರವ ಮೌನ ಆವರಿಸಿದ್ದು ಇಡೀ ಕನ್ನಡ ನಾಡೇ ಕಂಬನಿ ಇಟ್ಟಿದೆ.
ಇಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಪಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು ಮಧ್ಯಾಹ್ನ 1 ಗಂಟೆ ಬಳಿಕ ಮೈಸೂರಿಗೆ ರವಾನೆ ಮಾಡಲಾಗುತ್ತದೆ. ಬಳಿಕ ಮೈಸೂರು ಕಲಾಮಂದಿರದ ಮುಂಭಾಗ ಸಂಜೆ 6 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು ಬಳಿಕ ಕೋಲ್ಡ್ ಸ್ಟೋರೆಜ್ನಲ್ಲಿ ಇಡಲಾಗುತ್ತದೆ. ಸೆ.26ರಂದು ಶುಕ್ರವಾರ ಬೆಳಗ್ಗೆ ಕುವೆಂಪುನಗರದಲ್ಲಿರುವ ಭೈರಪ್ಪ ನಿವಾಸದಲ್ಲಿ ಪಾರ್ಥೀವ ಶರೀರ ತಂದು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗುತ್ತದೆ. ಸದ್ಯ ಭೈರಪ್ಪ ಅವರ ಪುತ್ರ ರವಿಶಂಕರ್ ಲಂಡನ್ ನಿಂದ ಆಗಮಿಸುತ್ತಿದ್ದಾರೆ.






















































