
ಉಡುಪಿ : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆಯ ಮತ ಎಣಿಕೆ ಇಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಅಕ್ಟೋಬರ್ 21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5906 ಮತದಾರರು ಮತ ಚಲಾಯಿಸಿದ್ದು, ಇಂದು ಬೆಳಿಗ್ಗೆ 8ಗೆ ಮತ ಎಣಿಕೆ ಆರಂಭಗೊಂಡಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಎರಡನೇ ಹಂತದಲ್ಲಿ ಮತ ಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯ ತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯ ದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು.





















































