
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಮತ್ತು
ಭಂಡಾರ್ಕರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ
ಹಾಗೂ ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ಇವರ
ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ
ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಡುಪಿ ಜ್ಞಾನಸುಧಾ ಪದವಿ
ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವ್, ಸುಧನ್ವ
ಯು ಮುಂಡ್ಕೂರ್, ಅಚಿಂತ್ಯ ಕೃಷ್ಣ, ಚಿರಾಗ್ ರಾವ್, ಎಸ್
ಅನಿರುಧ್ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.
ಇವರಲ್ಲಿ ವೈಷ್ಣವ್ ಇವರು ರಾಜ್ಯ ಮಟ್ಟಕ್ಕೆ
ಆಯ್ಕೆಯಾಗಿರುತ್ತಾರೆ. ಇವರನ್ನು ಅಜೆಕಾರು
ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ
ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.








































