
ಕಾರ್ಕಳ: ಇಲ್ಲಿನ ತಾಲೂಕು ಕಚೇರಿ ಜಂಕ್ಷನ್ ಬಳಿ ಬೈಪಾಸ್ ರಸ್ತೆಯಲ್ಲಿರುವ ಎಂ ಆರ್ ಪಿ ಎಲ್ ಪೆಟ್ರೋಲ್ ಬಂಕ್ ನಲ್ಲಿ ಕಳೆದ ಆಗಸ್ಟ್ 29ರಂದು ನಸುಕಿನ ಹೊತ್ತು 2:50 ಗಂಟೆ ಗೆ ಕಾರಿಗೆ ಟ್ಯಾಂಕ್ ತುಂಬಾ ಪೆಟ್ರೋಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕೆವಿ 20 ಎಂಇ 8121 ನಂಬರ್ ನ ಮಹೇಂದ್ರ xuv 300 ಕಾರಿಗೆ 4,253.88 ಪೆಟ್ರೋಲ್ ಹಾಕಿಸಿಕೊಂಡು ಚಾಲಕ ಬಂಕನ ಸಿಬ್ಬಂದಿ ಆಕಾಶ ಎಂಬವರಿಗೆ ಯುಪಿಐ ಸ್ಕ್ಯಾನರ್ ತರುವಂತೆ ಹೇಳಿದ್ದಾನೆ ಸಿಬ್ಬಂದಿ ಯುಪಿಐ ಸ್ಕ್ಯಾನರ್ ತರಲು ಒಳಗೆ ಹೋದಾಗ ಚಾಲಕ ಪೆಟ್ರೋಲ್ ಹಾಕಿದ ಹಣ ನೀಡದೆ ಮೋಸ ಮಾಡಿ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾನೆ.
ಕಾರು ಪೆಟ್ರೋಲ್ ಬಂಕ್ ಎದುರುಗಡೆಯ ರಸ್ತೆಯಾಗಿ ಸ್ವಲ್ಪ ಮುಂದಕ್ಕೆ ಹೋಗಿದ್ದು ಕೆಲವೇ ಕ್ಷಣದಲ್ಲಿ ಮತ್ತೆ ಹಿಂದಿರುಗಿದೆ. ಆ ವೇಳೆಗೆ ನಾಯಿಗಳು ಕಾರನ್ನು ಬೆನ್ನಟ್ಟಿಕೊಂಡು ಬೊಗಳಿರುವ ದೃಶ್ಯ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಮಾತ್ರವಲ್ಲದೆ ಕುಕ್ಕುಂದೂರು ಗಣಿತ ನಗರದ ಮೂಲಕವಾಗಿ ಹಿರಿಯಡ್ಕ ಮಾರ್ಗವಾಗಿ ಹಾದು ಹೋದ ಕಾರಿನ ದೃಶ್ಯ ಎರಡು ಕಡೆ ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು ಈ ಕಾರು ಬಂಟೆಕಲ್ಲಿನ ವ್ಯಕ್ತಿಯೊಬ್ಬರಿಗೆ ಸೇರಿದ್ದು ಎಂದು ತಿಳಿದುಬಂದಿದೆ.













