
ಕಾರ್ಕಳ: ಜನವರಿ 19ರಂದು ಕಾರ್ಕಳದ ಕಸಬಾ ಗ್ರಾಮದ ಮೀನಗುಂಡಿ ಕಾಂಪೌಂಡ್ ಕೆ. ವೆಂಕಟೇಶ ಹೆಗ್ಡೆ (22) ಎಂಬ ವಿದ್ಯಾರ್ಥಿಯು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿರುವ ವೆಂಕಟೇಶ್ ತಂದೆಯ ಬಳಿ ವಿದ್ಯಾಭ್ಯಾಸ ಮಾಡಲು ತನಗೆ ಕಷ್ಟವಾಗುತ್ತಿದೆ ಎಂದು ಹೇಳಿಕೊಂಡಿದ್ದು ಸುಮಾರು 10 ದಿನಗಳಿಂದ ಮೌನವಾಗಿದ್ದ. ಇದೇ ಕಾರಣದಿಂದ ಮನನೊಂದು ಜನವರಿ 19ರ ರಾತ್ರಿ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.





















