ವಿದ್ಯಾರ್ಥಿಗಳ ಕ್ರೀಡಾಸಕ್ತಿ, ದೇಶವು ಕ್ರೀಡೆಯಲ್ಲಿ ಸಾಧನೆ ಮಾಡುವಲ್ಲಿ ಪೂರಕ: ಚಿರಾಗ್ ರಾವ್

ಕಾರ್ಕಳ : ದೈಹಿಕವಾಗಿ ಸದೃಢರಾದಾಗ ಮಾತ್ರ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯ. ಪಾಠದ ಜೊತೆಗೆ ತಮ್ಮ ಆಸಕ್ತಿ ಕ್ಷೇತ್ರದ ಕಡೆಗೂ ಗಮನ ಹರಿಸಬೇಕು ವಿದ್ಯಾರ್ಥಿಗಳ ಕ್ರೀಡಾಸಕ್ತಿ ದೇಶವು ಕ್ರೀಡೆಯಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಲ್ಲಿ ಪೂರಕವಾಗಲಿ ಎಂದು ತಮ್ಮ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಬೆಳ್ಳಿ ಪದಕ ವಿಜೇತರಾದ ಚಿರಾಗ್ ರಾವ್ ಹೇಳಿದರು.
ಅವರು ಕುಕ್ಕುಂದೂರು ಕೆ. ಎಂ. ಇ. ಎಸ್. ಶಾಲೆಯ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಆರೋಗ್ಯಕರ ಮತ್ತು ಕ್ರಿಯಾಶೀಲರಾಗಲು ಕ್ರೀಡೆ ನೆರವಾಗುತ್ತದೆ. ಕ್ರೀಡೆ ಸೋಲೇ ಗೆಲುವಿನ ಮೆಟ್ಟಿಲು ಎಂಬ ಅರಿವು ಮೂಡಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳಲ್ಲಿ ಧೈರ್ಯ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವನೆಯನ್ನು ಬೆಳೆಸುತ್ತದೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರಾಜರಾಮ ಶೆಟ್ಟಿ ಅವರು ಭಾಷಣದಲ್ಲಿ ಹೇಳಿದರು.
ಕೆ. ಎಂ. ಇ. ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್.ಇಮ್ತಿಯಾಜ್ ಅಹಮದ್ ಮಾತನಾಡಿ ವಿದ್ಯಾರ್ಥಿಗಳು ಗೆಲ್ಲುವ ಉತ್ಸಾಹದಿಂದ ಪಾಲ್ಗೊಂಡು, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಪ್ರಾಂಶುಪಾಲರಾದ ರಾಮಚಂದ್ರ ನೆಲ್ಲಿಕಾರ್ ಮಾತನಾಡಿ ವಿದ್ಯಾರ್ಥಿಗಳಿ ಗೆಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀಡಾಕೂಟ ಏರ್ಪಡಿಸಲಾಗಿದ್ದು, ಇದು ಕ್ರೀಡಾ ಸಾಧನೆ ಮಾಡುವಲ್ಲಿ ಸ್ಫೂರ್ತಿಯಾಗಲಿ ಎಂದರು.
ವಿದ್ಯಾರ್ಥಿಗಳ ಪಥ ಸಂಚಲನೆಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ಚಂದ್ರ ಹೆಗ್ಡೆ ಚಾಲನೆ ನೀಡಿದರು .ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಪಾಟ್ಕಾರ್ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಲೊಲಿಟಾ ಡಿಸಿಲ್ವಾ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಸರಸ್ವತಿ ಉಪಸ್ಥಿತರಿದ್ದರು .
ಶಿಕ್ಷಕಿಯಾರಾದ ಶ್ರೀಮತಿ ಮಹಿಮಾ ನಿರೂಪಿಸಿ, ಎಲ್ವಿನಾ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಚೇತಾ ಧನ್ಯವಾದವಿತ್ತರು.



















