
ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಸೋನಿಯಾ ಗಾಂಧಿ ಅವರ ಅಧಿಕಾರ ತ್ಯಾಗದ ಸಂದರ್ಭವನ್ನು ಉಲ್ಲೇಖಿಸಿ ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಸೋನಿಯಾ ಗಾಂಧಿ ಅವರಿಗೆ ಪ್ರಧಾನಿಯಾಗುವ ಅವಕಾಶ ಇತ್ತು. ರಾಷ್ಟ್ರಪತಿಗಳು ಸರ್ಕಾರ ರಚನೆ ಮಾಡುವಂತೆ ಆಹ್ವಾನ ನೀಡಿದ್ದರು. ಆದ್ರೆ ಸೋನಿಯಾ ಗಾಂಧಿ ಅಧಿಕಾರ ಮುಖ್ಯವಲ್ಲ ಅಂದರು. ಒಬ್ಬ ಆರ್ಥಿಕ ತಜ್ಞ ದೇಶ ಉಳಿಸಬಹುದು ಅಂತ ಮನಮೋಹನ್ ಸಿಂಗ್ ಅವರನ್ನ ಪ್ರಧಾನಿಯಾಗಿ ಮಾಡಿದ್ರು. ಇದು ಸೋನಿಯ ಗಾಂಧಿ ಅವರ ರಾಜಕೀಯ ತ್ಯಾಗದ ಅಪ್ರತಿಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇಷ್ಟು ದೊಡ್ಡ ಪ್ರಜಾಪ್ರಭುತ್ವದಲ್ಲಿ ಯಾರಾದ್ರೂ ಇಷ್ಟೊಂದು ತ್ಯಾಗ ಮಾಡಿದ್ದಾರೆಯೇ? ಇಂದು ಯಾರಾದರೂ ಸಣ್ಣ ಹುದ್ದೆಯನ್ನ ತ್ಯಾಗ ಮಾಡೋದಕ್ಕೆ ರೆಡಿ ಇದ್ದಾರಾ? ಪಂಚಾಯತ್ ಮಟ್ಟದಲ್ಲು ಸಹ ಅಧಿಕಾರ ತ್ಯಾಗ ಮಾಡಲ್ಲ. ಕೆಲ ಶಾಸಕರು ಮತ್ತು ಸಚಿವರು ಅಧಿಕಾರ ಹಂಚಿಕೊಳ್ಳಲು ಸಹ ಒಪ್ಪುವುದಿಲ್ಲ. ಅಂತಹದ್ರಲ್ಲಿ ಸೋನಿಯಾ ಗಾಂಧಿ ತ್ಯಾಗ ಮಾಡಿದರು ಎಂದು ಸ್ಮರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.






