ಉದ್ಘಾಟಕರಾಗಿ ಉಡುಪಿ ಎನ್.ಸಿ.ಸಿ ಘಟಕದ ಕಮಾಂಡರ್ ಅಶ್ವಿನ್. ಎಂ.ರಾವ್

ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 11 ಜುಲೈ 2025 ರಂದು 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು.
ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಆಶ್ವಿನ್ ಎಂ. ರಾವ್ ರವರು ಮಾತನಾಡಿ ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ಎನ್.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, “ಯುವಜನತೆ ರಾಷ್ಟ್ರದ ಭವಿಷ್ಯ, ಅವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ” ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ ಮುಲ್ತಾನಿ, ಪಿ.ಐ ಸ್ವಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಅಂಗ್ಲ ಭಾಷಾ ಉಪನ್ಯಾಸಕ ಮಹೇಶ್ ಆರ್. ಶೆಣೈ ಕೆ. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂಗ್ಲ ಭಾಷಾ ಉಪನ್ಯಾಸಕಿ ಸುದೀಕ್ಷಾ ಎಸ್. ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.