26 C
Udupi
Sunday, February 22, 2026
spot_img
spot_img
HomeBlogಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿಯ ಸಂಭ್ರಮಾಚರಣೆ

ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿಯ ಸಂಭ್ರಮಾಚರಣೆ

ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಡಾ|| ಬಿ.ಆರ್ ಅಂಬೇಡ್ಕರ್‌ರವರ ಜಯಂತಿಯನ್ನು ಬಹಳ
ಸಡಗರದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಮ್ಮ ಸಂಸ್ಥೆಯ ಕಾಲೇಜು
ವಿಭಾಗದ ಪ್ರಾಂಶುಪಾಲರಾದ ಶ್ರೀ.ಲಕ್ಷ್ಮೀ ನಾರಾಯಣ ಕಾಮತ್, ಪ್ರಾಥಮಿಕ ವಿಭಾಗದ
ಮುಖ್ಯೋಪಾಧ್ಯಾಯರಾದ ಶ್ರೀ. ರುಡಾಲ್ಫ್ ಕಿಶೋರ್ಲೋ ಬೋ ಹಾಗೂ ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ
ಜೋಸ್ನಾ ಲತಾ ಉಪಸ್ಥಿತರಿದ್ದರು. ಶ್ರೀ ರುಡಾಲ್ಫ್ ಕಿಶೋರ್ಲೋ ಬೋರವರು ಅಂಬೇಡ್ಕರ್ ಜಯಂತಿಯ
ಮಹತ್ವವನ್ನು ತಿಳಿಸುತ್ತಾ ಯಾವುದೇ ಒಂದು ಕಟ್ಟಡದ ನಿರ್ಮಾಣಕ್ಕೆ ಅಡಿಪಾಯ ಎಷ್ಟು ಮುಖ್ಯವೋ ಅದೇ ರೀತಿ ನಮ್ಮ ಜೀವನಕ್ಕೆ ಸಂವಿಧಾನದ ಮೌಲ್ಯಗಳು ಅಷ್ಟೇ ಮುಖ್ಯ ಎಂದು ತಿಳಿಸಿದರು. ಶಿಕ್ಷಕಿಯಾದ ಶ್ರೀಮತಿ ರಮಿತಾ ಶೆಟ್ಟಿಯವರು ಸಂವಿಧಾನದ ಕುರಿತು ಪ್ರಾಸ್ತಾವಿಕ
ಮಾತುಗಳನ್ನಾಡಿದರು.


ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸಮೀಕ್ಷಾ ಜೋಗಿ, ಸ್ವಾಗತವನ್ನು ಶೃತಿ ಶೆಟ್ಟಿ ಮತ್ತು
ಧನ್ಯವಾದವನ್ನು ಶ್ರೀಮತಿ ಉಮಾದೇವಿ ನೆರವೇರಿಸಿದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page