
ಉಡುಪಿ: ಗರುಡ ಗ್ಯಾಂಗ್ನ ನಟೋರಿಯಸ್ ರೌಡಿ ಇಸಾಕ್ ನನ್ನು ಹಾಸನದ ಚನ್ನರಾಯಪಟ್ಟಣದಿಂದ ಬಂಧಿಸಿ ಉಡುಪಿಗೆ ವಿಚಾರಣೆಗೆ ಕರೆದುಕೊಂಡು ಬರುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಈ ವೇಳೆ ಹಿರಿಯಡ್ಕ ಸಮೀಪದ ಗುಡ್ಡೆ ಅಂಗಡಿ ಬಳಿ ಆತನ ಕಾಲಿಗೆ ಗುಂಡೇಟು ಬಿದ್ದಿದೆ.
ಪ್ರಕರಣದಲ್ಲಿ ಮೂವರು ಪೊಲೀಸರಿಗೆ ಗಾಯವಾಗಿದ್ದು, ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಶದಲ್ಲಿರುವ ಮೂವರು ಆರೋಪಿಗಳ ವಿಚಾರಣೆ ಮುಂದುವರಿದಿದೆ.