
ಬೆಂಗಳೂರು: ಕೆಲ ದಿನಗಳ ಹಿಂದೆ ಗೋಬಿ, ಕಬಾಬ್, ಪಾನಿಪುರಿಯಲ್ಲಿ ಹಾನಿಕಾರಕ ಅಂಶಗಳ ಪತ್ತೆ ಬಳಿಕ ಈಗ ತರಕಾರಿಗಳಲ್ಲಿನ ಹಾನಿಕಾರಕ ಅಂಶಗಳನ್ನು ಪತ್ತೆಹಚ್ಚಲು ಆಹಾರ ಸುರಕ್ಷತಾ ಇಲಾಖೆಯು ಮುಂದಾಗಿದ್ದು ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿವಿಧ ತರಕಾರಿಗಳ ಕ್ವಾಲಿಟಿ ಟೆಸ್ಟ್ ಮಾಡುತ್ತಿದೆ.
ತರಕಾರಿಯಲ್ಲಿರುವ ಹಾನಿಕಾರಕ ಅಂಶಗಳು:
- ತರಕಾರಿ ಗಿಡಗಳಿಗೆ ಔಷಧಿ ಸಿಂಪಡಣೆ
- ಔಷಧಿ ಸಿಂಪಡಣೆ ಮಾಡುವುದರಿಂದ ಸುರಕ್ಷತೆ ಇಲ್ಲ
- ಕಬ್ಬಿಣದ ಅಂಶಗಳು ಪತ್ತೆ
- ಔಷಧಿ ಸಿಂಪಡಣೆ ಮಾಡಿರುವ ತರಕಾರಿ ತಿಂದರೆ ಆರೋಗ್ಯದ ಮೇಲೆ ಪರಿಣಾಮ
- ಸುರಕ್ಷತೆ ಇಲ್ಲದೇ ಇರುವ ಆಹಾರ ಸ್ಲೋಪಾಯಿಸನ್ಗೆ ಸಮ
ಒಂದು ವೇಳೆ ಹಾನಿಕಾರಕ ಅಂಶಗಳು ಪತ್ತೆಯಾದರೆ ಮುಂದೆ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.








