ದೂಪದಕಟ್ಟೆ–ಹಾಳೆಕಟ್ಟೆ ಮಾರ್ಗದಲ್ಲಿ ಸ್ವಚ್ಛತೆ ಹಾಗೂ ಜಾಗೃತಿ ಕಾರ್ಯಕ್ರಮ

ಜುಲೈ 12 ಭಾನುವಾರದಂದು ಶ್ರೀ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ (ರಿ.) ನಿಟ್ಟೆ ಮತ್ತು ಅದರ ಉಪಸಮಿತಿಗಳ ಆಶ್ರಯದಲ್ಲಿ ದೂಪದಕಟ್ಟೆಯಿಂದ ಹಾಳೆಕಟ್ಟೆವರೆಗೆ ಸುಮಾರು 5 ಕಿ.ಮೀ.ವರೆಗೆ ರಾಜ್ಯ ಹೆದ್ದಾರಿ ಮಾರ್ಗದಲ್ಲಿ ‘ರಸ್ತೆ ಸುರಕ್ಷತಾ ಅಭಿಯಾನ’ವನ್ನು ಬೆಳಿಗ್ಗೆ 7 ಗಂಟೆಯಿಂದ ಆಯೋಜಿಸಲಾಗಿದೆ.
ಈ ಅಭಿಯಾನದಲ್ಲಿ ರಸ್ತೆ ಬದಿಯ ಮಣ್ಣು ತೆರವುಗೊಳಿಸುವುದು, ರಸ್ತೆಗೆ ಅಡ್ಡಿಯಾಗಿರುವ ಗಿಡಗಂಟಿಗಳನ್ನು ಕತ್ತರಿಸಿ ಸ್ವಚ್ಛಗೊಳಿಸುವುದು, ರಸ್ತೆ ಸೂಚನಾ ಫಲಕಗಳನ್ನು ಸ್ವಚ್ಛಗೊಳಿಸುವುದು ಹಾಗೂ ಗಿಡಗಂಟಿಗಳಿಂದ ಮುಚ್ಚಿಹೋಗಿರುವ ಎಚ್ಚರಿಕೆ ಫಲಕಗಳನ್ನು ಗೋಚರಿಸುವಂತೆ ಮಾಡುವ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ.
ಈ ಕಾರ್ಯಕ್ರಮದ ಮೂಲಕ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲಕರ ವಾತಾವರಣ ನಿರ್ಮಿಸುವುದು ಉದ್ದೇಶವಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಪ್ರದೇಶದ ರಸ್ತೆ ಸುರಕ್ಷತೆಗೆ ಕೈಜೋಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.











































