29.1 C
Udupi
Friday, April 24, 2026
spot_img
spot_img
HomeBlogತಮಿಳುನಾಡು ಮೂಲದ ಎಆರ್ ಫುಡ್ಸ್ ಸರಬರಾಜು ಮಾಡಿದ ತುಪ್ಪ ಕಲಬೆರಕೆಯಿಂದ ಕೂಡಿತ್ತು: ಟಿಡಿಡಿ ಇಓ

ತಮಿಳುನಾಡು ಮೂಲದ ಎಆರ್ ಫುಡ್ಸ್ ಸರಬರಾಜು ಮಾಡಿದ ತುಪ್ಪ ಕಲಬೆರಕೆಯಿಂದ ಕೂಡಿತ್ತು: ಟಿಡಿಡಿ ಇಓ

ತಿರುಪತಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿರುವ ತಿಮ್ಮಪ್ಪನ ಮಹಾಪ್ರಸಾದ ಲಡ್ಡುನಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪಕ್ಕೆ ಪೂರಕವಾಗಿ ಟಿಟಿಡಿ ಇಓ ಶ್ಯಾಮಲರಾವ್ ಪ್ರತಿಕ್ರಿಯಿಸಿ ತಮಿಳುನಾಡು ಮೂಲದ ಎಆರ್ ಫುಡ್ಸ್ ಸರಬರಾಜು ಮಾಡಿದ ತುಪ್ಪ ಕಲಬೆರಕೆಯಿಂದ ಕೂಡಿತ್ತು. ತಕ್ಷಣವೇ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಟಿಟಿಡಿ ಲಡ್ಡುಗೆ ಬಳಸುವ ತುಪ್ಪದ ಗುಣಮಟ್ಟ ಪರೀಕ್ಷೆಗೆ ಸ್ವಂತ ಲ್ಯಾಬ್ ಹೊಂದಿಲ್ಲ. ಅಧಿಕಾರಿಗಳು ಈ ಹಿಂದೆ ಪರೀಕ್ಷೆ ಮಾಡಿರಲಿಲ್ಲ. ಬರೀ 411 ರೂಪಾಯಿಗೆ ಕೆಜಿ ತುಪ್ಪ ಸರಬರಾಜು ಮಾಡಿದ್ದಾರೆ. ಈ ದರಕ್ಕೆ ಉತ್ತಮ ಗುಣಮಟ್ಟದ ತುಪ್ಪ ಪೂರೈಕೆ ಸಾಧ್ಯನಾ ಎಂದು ಎಂದು ಶ್ಯಾಮಲರಾವ್ ಪ್ರಶ್ನಿಸಿದ್ದಾರೆ.

ದೇಗುಲದ ಮಾಜಿ ಪ್ರಧಾನ ಅರ್ಚಕ ರಮಣ ದೀಕ್ಷಿತಲು ಕಳೆದ ಐದು ವರ್ಷದಿಂದ ಈ ಮಹಾ ಪಾಪ ನಡೆಯುತ್ತಿತ್ತು ಎಂದು ಆಪಾದಿಸಿದ್ದಾರೆ. ಸನಾತನ ಧರ್ಮ ರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೇಂದ್ರವನ್ನು ಡಿಸಿಎಂ ಪವನ್ ಕಲ್ಯಾಣ್ ಆಗ್ರಹಿಸಿದ್ದು ಆಡಳಿತಾರೂಢ ಟಿಡಿಪಿ ನಾಯಕರೆಲ್ಲಾ ಜಗನ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page