
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಶುಕ್ರವಾರ ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿ ಹನಿಟ್ರ್ಯಾಪ್ ಪಿತಾಮಹ ನರೇಂದ್ರ ಮೋದಿ ಆಗಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಸಂಜಯ್ ಜೋಶಿ ಅವರ ಹನಿಟ್ರ್ಯಾಪ್ ಮಾಡಿದ್ದು ನರೇಂದ್ರ ಮೋದಿ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯೇ ಭಾರತದ ಹನಿಟ್ರ್ಯಾಪ್ ಪಿತಾಮಹ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬಗ್ಗೆ ಪುಸ್ತಕ ಇದೆ. ಅಲ್ಲಿ ಏನೆಲ್ಲಾ ನಡೆದಿದೆ ಗೊತ್ತಾ? ಎಂದು ಪ್ರಶ್ನಿಸಿದಾಗ ಮಧ್ಯ ಪ್ರವೇಶ ಮಾಡಿದ ಕಿಶೋರ್ ಕುಮಾರ್ ಅವು ಯಾರಪ್ಪನ ಮನೆಯಲ್ಲೂ ನಡೆದಿಲ್ಲ ಎಂದರು. ಬಳಿಕ ಸಭಾಪತಿ RSS ಬಗ್ಗೆ ಮಾತನಾಡದಂತೆ ಹರಿಪ್ರಸಾದ್ ಅವರಿಗೆ ಎಚ್ಚರಿಕೆ ನೀಡಿದರು.
ಹಿಂದೂಕೋಡ್ ಬಿಲ್ ಜಾರಿಗೆ ತರಲು ಆಗಿಲ್ಲ ಎಂಬ ಕಾರಣಕ್ಕೆ ನೆಹರು ಸಂಪುಟಕ್ಕೆ ಅಂಬೇಡ್ಕರ್ ಅವರು ರಾಜೀನಾಮೆ ಕೊಟ್ಟಿದ್ದರು. ಅದೇ ಸಂವಿಧಾನವನ್ನ ರಾಮಲೀಲಾ ಮೈದಾನಲ್ಲಿ ಸುಟ್ಟಿದ್ದು ಯಾರು ಅನ್ನೋದು ಇತಿಹಾಸ ಗೊತ್ತಿದೆ. ಭಾರತ ಇಬ್ಬಾಗವಾಗಲು ಜಿನ್ನಾ ಸಾವರ್ಕರ್ ಒಂದೇ ಮನಸ್ತಿತಿಯಲ್ಲಿದ್ದರು. ಆರ್ಟಿಕಲ್ 15-4, 16-4, ಪ್ರಕಾರ ಮೀಸಲಾತಿಗೆ ಅವಕಾಶ ಇದೆ. ಬಿಲ್ನಲ್ಲಿ ಇಸ್ಲಾಂ ಧರ್ಮಕ್ಕೆ ಮೀಸಲಾತಿ ಕೊಡುತ್ತಿಲ್ಲ. ಇಸ್ಲಾಂ ಧರ್ಮ ಅಲ್ಲ, ಅದೊಂದು ಸಮುದಾಯ. 1977ರಿಂದ ಮುಸ್ಲಿಂ ಸಮುದಾಯ ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದಿದೆ ಎಂದು ಹಲವು ಕಮಿಷನ್ ವರದಿಗಳು ಹೇಳಿವೆ. ಈ ಬಿಲ್ ಸಂವಿಧಾನ ವಿರೋಧಿ ಆಗಿ ಕಾಣೋದಿಲ್ಲ. ಉತ್ತರ ಭಾರತದಲ್ಲಿ ಆದಿವಾಸಿಗಳಿಗೆ ಮೀಸಲಾತಿ ಇದೆ ಎಂದು ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ





