
ಡೆಹ್ರಾಡೂನ್: ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮುನ್ನವೇ ಉತ್ತರಾಖಂಡದಲ್ಲಿ ಮತ್ತೊಂದು ಬೆಚ್ಚಿಬಿಳಿಸುವ ಘಟನೆ ನಡೆದಿದ್ದು ಅದೇನೆಂದರೆ ನರ್ಸ್ವೊಬ್ಬರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ.
ಜುಲೈ 30 ರ ಸಂಜೆ ಉತ್ತರಾಖಂಡದ ಖಾಸಗಿ ಆಸ್ಪತ್ರೆಯಿಂದ ಉತ್ತರ ಪ್ರದೇಶದ ಗಡಿ ಬಳಿಯ ತನ್ನ ಮನೆಗೆ ಹಿಂದಿರುಗುತ್ತಿದ್ದಾಗ ನರ್ಸ್ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯಲಾಗಿದೆ.
ಮರುದಿನ, ನರ್ಸ್ ಕಾಣೆಯಾಗಿರುವ ಬಗ್ಗೆ ಆಕೆಯ ಸಹೋದರಿ ದೂರು ನೀಡಿದ್ದು ಎಂಟು ದಿನಗಳ ನಂತರ ದಿಬ್ದಿಬಾ ಗ್ರಾಮದ ಆಕೆಯ ಮನೆಯಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಖಾಲಿ ಜಾಗದಲ್ಲಿ ಆಕೆಯ ಶವ ಪತ್ತೆಯಾಗಿದೆ.
ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಆರೋಪಿ ಪತ್ತೆಗೆ ತನಿಖೆ ನಡೆಸುತ್ತಿದ್ದಾಗ ಸಂತ್ರಸ್ತೆಯ ಕದ್ದ ಮೊಬೈಲ್ ಫೋನ್ ಸಿಕ್ಕಿದೆ. ಬುಧವಾರ ಉತ್ತರ ಪ್ರದೇಶದ ಬರೇಲಿಯ ದಿನಗೂಲಿ ಕಾರ್ಮಿಕನಾಗಿದ್ದಆರೋಪಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಕುಡಿದ ಅಮಲಿನಲ್ಲಿದ್ದ ಧರ್ಮೇಂದ್ರ ಸಂತ್ರಸ್ತೆಯನ್ನು ನೋಡಿ ಆಕೆಯನ್ನು ಹಿಂಬಾಲಿಸಿದ್ದಾನೆ. ನಂತರ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆಕೆಯನ್ನು ಪೊದೆಯೊಂದಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಕೆಯ ಫೋನ್ ಮತ್ತು ಆಕೆಯ ಪರ್ಸ್ನಲ್ಲಿದ್ದ 3,000 ರೂ. ಕದ್ದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.













