29.1 C
Udupi
Saturday, April 19, 2025
spot_img
spot_img
HomeBlogಪುಸ್ತಕದ ಪಾಠದಷ್ಟೇ ಜೀವನ ಪಾಠವು ಮುಖ್ಯ…

ಪುಸ್ತಕದ ಪಾಠದಷ್ಟೇ ಜೀವನ ಪಾಠವು ಮುಖ್ಯ…

ಮಗಳ ಶೈಕ್ಷಣಿಕ ಸಾಧನೆಯನ್ನು ಸಂಭ್ರಮಿಸಿದ ಕಾರ್ಕಳ ಶಾಸಕ

ಬೆಂಗಳೂರು/ಉಡುಪಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಅವರ ಪುತ್ರಿ ಪರೀಕ್ಷೆಯಲ್ಲಿ ಶೇ.97 ಅಂಕ ಗಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿ ಮಗಳು ಪ್ರೇರಣಾ ಅವರ ಸಾಧನೆ ವಿಚಾರವನ್ನು ಹಂಚಿಕೊಂಡ ಶಾಸಕರು ‘ಮಗಳೇ ಓದಿಯಾಯ್ತಾ ಎಂದು ಪ್ರಶ್ನಿಸಿದಾಗಲೆಲ್ಲ, ‘ಒಳ್ಳೆ ಮಾರ್ಕ್ಸ್ ತೆಗೆದರೆ ಆಯ್ತಲ್ವಾ ಈಗ ಕಿರಿಕಿರಿ ಮಾಡಬೇಡಿ’ ಎಂದು ಹುಸಿಕೋಪ ಪ್ರದರ್ಶಿಸುತ್ತಿದ್ದಳು ನನ್ನ ಮುದ್ದಿನ ಮಗಳು ಪ್ರೇರಣಾ. ಈಗ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.97 ರಷ್ಟು ಅಂಕ ಪಡೆದು ಉತ್ತೀರ್ಣಳಾಗಿದ್ದಾಳೆ.

ಪರೀಕ್ಷೆಯೆಂದರೆ ಮಕ್ಕಳಿಗಿಂತ ಹೆತ್ತವರಿಗೆ ಕಾಳಜಿ ಹೆಚ್ಚು. ಆದರೆ ನಾವೆಂದೂ ಅಂಕ ಗಳಿಕೆಯ ಒತ್ತಡವನ್ನು ಅವಳ ಮೇಲೆ ಹೇರಿರಲಿಲ್ಲ. ಆದರೆ, ತನ್ನ ಜವಾಬ್ದಾರಿಯನ್ನು ಅರಿತು ಪರಿಶ್ರಮದಿಂದ ಓದಿದಳು. ಜ್ಞಾನಸುಧಾದ ಉಪನ್ಯಾಸಕರ ತಂಡ ಸೂಕ್ತ ಮಾರ್ಗದರ್ಶನ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲೇಬೇಕು. ಒಬ್ಬ ವಿಧೇಯ ವಿದ್ಯಾರ್ಥಿನಿಯಾಗಿ ಓದು ಹಾಗೂ ಮುಂದಿನ ಗುರಿಯೆಡೆಗಿನ ನಿನ್ನ ಸ್ಪಷ್ಟತೆಯ ಬಗ್ಗೆ ನಾನು ಹೆಮ್ಮೆ ಪಡುತ್ತೇನೆ.

ವಿದ್ಯಾರ್ಥಿ ಜೀವನದಲ್ಲಿ ಸುಖಕ್ಕಿಂತ ಪರಿಶ್ರಮದ ಹಾದಿ ಮುಖ್ಯ ಎಂಬ ನಮ್ಮ ಕಿವಿ ಮಾತನ್ನು ಸದಾ ಮನಸಿನಲ್ಲಿಟ್ಟುಕೊಂಡಿದ್ದ ಮಗಳು ಆರು ಬಾರಿ ಪೂರ್ವಸಿದ್ಧತಾ ಪರೀಕ್ಷೆ ಬರೆದು ನಿರಂತರ ಶ್ರಮ ವಹಿಸಿದ್ದಳು. ತನ್ನ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂಬ ಬೇಸರ ಅವಳಿಗಿದ್ದರೂ ತಂದೆಯಾಗಿ ಅವಳ ಈ ಸಾಧನೆ ಸಂತೋಷ ನೀಡಿದೆ. ಮತ್ತೊಮ್ಮೆ ಅಭಿನಂದನೆಗಳು ಮಗಳೇ… ಪುಸ್ತಕದ ಪಾಠದಷ್ಟೇ ಜೀವನದ ಪಾಠವೂ ಮುಖ್ಯ. ಆ ಸವಾಲನ್ನು ಅರ್ಥ ಮಾಡಿಕೊಳ್ಳುವುದೇ ನಿಜವಾದ ಭವಿಷ್ಯ ಎಂದು ಬರೆದು ಹಂಚಿಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page