
ಚಿತ್ರದುರ್ಗ: ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ್ ವಿದ್ಯಾರ್ಥಿಯೊಬ್ಬ ಪೋಷಕರಿಗೆ ಕರೆ ಮಾಡಿದಕ್ಕಾಗಿ ಆತನನ್ನು ನೆಲಕ್ಕೆ ತಳ್ಳಿ ಎಲ್ಲೆಂದರಲ್ಲಿ ಮನಬಂದಂತೆ ಒದ್ದಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.
ಈ ವಿಡಿಯೋ ವೈರಲ್ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್ನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿ ತಡರಾತ್ರಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ನ್ಯಾಯಾಧೀಶರು ತಡರಾತ್ರಿ ಆರೋಪಿಯನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ. ಅಲ್ಲದೆ ಶಿಕ್ಷಕ ವೀರೇಶ್ ಹಿರೇಮಠ್ನನ್ನು ಅಮಾನತುಗೊಳಿಸಿ ಚಿತ್ರದುರ್ಗ ಡಿಸಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.



















































