30.7 C
Udupi
Tuesday, February 10, 2026
spot_img
spot_img
HomeBlogಬಜೆಟ್ ಸಭೆಗೂ ಗೈರು, ದೆಹಲಿಯತ್ತ ಡಿಕೆ ಶಿವಕುಮಾರ್: ಕಾಂಗ್ರೆಸ್ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರ

ಬಜೆಟ್ ಸಭೆಗೂ ಗೈರು, ದೆಹಲಿಯತ್ತ ಡಿಕೆ ಶಿವಕುಮಾರ್: ಕಾಂಗ್ರೆಸ್ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರ

ಬೆಂಗಳೂರು: ಇತ್ತೀಚೆಗೆ ಶಾಂತವಾಗಿದ್ದಂತೆ ಕಂಡಿದ್ದ ಕರ್ನಾಟಕ ಕಾಂಗ್ರೆಸ್‌ನ ಅಧಿಕಾರ ಹಂಚಿಕೆ ವಿಚಾರ ಇದೀಗ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದರೂ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಅಸ್ಸಾಂ ಚುನಾವಣೆಗೆ ಸಂಬಂಧಿಸಿದ ಸಭೆಗೆ ದೆಹಲಿಗೆ ಹೋಗುತ್ತಿದ್ದೇನೆ ಎನ್ನುವ ಅವರು, ತಮ್ಮದೇ ಇಲಾಖೆಗಳಿಗೆ ಸಂಬಂಧಿಸಿದ ಸಭೆಗೆ ಗೈರಾಗಿರುವುದು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ.

ಸಭೆಗೆ ಗೈರಾಗುವುದೇ ಸಿಎಂ ವಿರುದ್ಧದ ಅಸಮಾಧಾನದ ಸೂಚನೆಯೇ ಎಂಬ ಚರ್ಚೆ ನಡೆಯುತ್ತಿದ್ದು, ದೆಹಲಿಯಲ್ಲಿ ಡಿಕೆ ಶಿವಕುಮಾರ್ ನಡೆಸಲಿರುವ ಮಾತುಕತೆಗಳ ಮೇಲೆ ಎಲ್ಲರ ಗಮನ ಹರಿದಿದೆ. ತಾವು ಪಕ್ಷದ ಅಧ್ಯಕ್ಷರಾಗಿರುವ ಕಾರಣ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ, ನನ್ನ ಕಷ್ಟ–ದುಃಖಗಳನ್ನೂ ಹಂಚಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ಇದರಿಂದಾಗಿ, ಅಧಿಕಾರ ಹಸ್ತಾಂತರ ಕುರಿತು ಡಿಕೆ ಶಿವಕುಮಾರ್ ವರಿಷ್ಠರ ಮುಂದೆ ಅಸಮಾಧಾನ ವ್ಯಕ್ತಪಡಿಸಬಹುದೇ ಎಂಬ ಊಹಾಪೋಹ ಜೋರಾಗಿದೆ. ಈ ನಡುವೆ ಬಜೆಟ್ ಸಭೆಗೆ ಗೈರು ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಸಿಎಂ ಅನುಮತಿಯೊಂದಿಗೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದು, ಕಾಂಗ್ರೆಸ್‌ನ ಒಳರಾಜಕೀಯ ದಿನದಿಂದ ದಿನಕ್ಕೆ ತೀವ್ರವಾಗುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page