ಸಂಜೆ 5 ರಿಂದಲೇ ಕದನ ವಿರಾಮ ಜಾರಿ

ಪಾಕಿಸ್ತಾನದ ಜೊತೆಗಿನ ಕದನ ವಿರಾಮಕ್ಕೆ ಭಾರತ ಒಪ್ಪಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯವು ವರದಿ ಮಾಡಿದೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ,ಉಗ್ರರು ದಾಳಿ ನಡೆಸಿ ಅಮಾಯಕರ ಹತ್ಯೆ ನಡೆಸಿದರು. ಇದಕ್ಕೆ ಪ್ರತಿಕಾರವಾಗಿ ಮೇ 7ರಂದು ಭಾರತವು ಆಪರೇಷನ್ ಸಿಂಧೂರ ಹೆಸರಿನಲ್ಲಿ, ಪಾಕ್ ನಲ್ಲಿ ನೆಲೆಸಿದ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿತು. ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ಉಂಟಾಗುತ್ತಿದ್ದಂತೆಯೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಭಯ ರಾಷ್ಟ್ರಗಳಿಗೆ ಕದನ ವಿರಾಮ ಮಾಡುವಂತೆ ಸಲಹೆ ನೀಡಿದರು. ಅವರ ಸೂಚನೆಯಂತೆ ಎರಡು ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ವರದಿಯಾಗಿದೆ.
ಇಂದು ಸಂಜೆ 5:00ಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.



















