
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟ ನಡೆಯಿತು.
ಉದ್ಘಾಟನಾ ಸಮಾರಂಭ ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಫೆಡರೇಶನ್ನ ಅಂತರಾಷ್ಟ್ರೀಯ ನಿರ್ಣಾಯಕರಾದ ಶ್ರೀರಾಮ್ ಕೌಡೂರು, ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಜೊತೆ ಜೊತೆಗೆ ನಿರ್ದಿಷ್ಟ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವದರಿಂದ ಹವ್ಯಾಸವಾಗಿ ಜೀವನದುದ್ದಕ್ಕೂ ಶಿಸ್ತು ಬದ್ಧತೆಗೆ, ಆರೋಗ್ಯ ವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಜಿಲ್ಲೆಯ ಉಪ ನಿರ್ದೇಶಕರಾದ ಶ್ರೀ ಮಾರುತಿಯವರು ಭಾಗವಹಿಸಿ ಶುಭ ಹಾರೈಸಿದರು.

ಈ ಸಂದರ್ಭ ಶ್ರೀರಾಮ್ ಕೌಡೂರು ಇವರನ್ನು ಟೇಬಲ್ ಟೆನ್ನಿಸ್ ಕ್ರೀಡೆಗೆ ನೀಡಿದ ಕೊಡುಗೆಯನ್ನು ಶ್ಲಾಘಿಸಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಶೆಟ್ಟಿ ಮತ್ತು ಉಡುಪಿ ಜಿಲ್ಲಾ ಪದವಿಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸತೀಶ್ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಮತ್ತು ಅಜೆಕಾರು
ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭಮುಖ್ಯ ಅತಿಥಿಯಾಗಿ, ಉಡುಪಿ ಜಿಲ್ಲಾ ಅನುದಾನಿತ ಮತ್ತುಅನುದಾನರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ದಯಾನಂದ ಪೈ ಭಾಗವಹಿಸಿ ಪ್ರಶಸ್ತಿಗಳನ್ನು ವಿತರಿಸಿ ಶುಭಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾಂಶುಪಾಲರಾದ ದಿನೇಶ ಎಂ. ಕೊಡವೂರು ವಹಿಸಿದ್ದರು. ಮಣಿಪಾಲ ಜ್ಞಾನಸುಧಾ ದೈಹಿಕ ಶಿಕ್ಷಣ ಉಪನ್ಯಾಸಕರಾದ ಅರುಣ್ ಕುಮಾರ್ ವಂದಿಸಿದರು, ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು

ಫಲಿತಾಂಶದ ವಿವರ
ಬಾಲಕಿಯರ ವಿಭಾಗ – ಪ್ರಥಮ ಮಣಿಪಾಲ ಜ್ಞಾನಸುಧಾ
ಪದವಿ ಪೂರ್ವ ಕಾಲೇಜು, ವಿದ್ಯಾನಗರ,
ದ್ವಿತೀಯ :
ಎಂ.ಜಿ.ಎಂ ಪ.ಪೂ. ಕಾಲೇಜು ಉಡುಪಿ,
ಬಾಲಕರ ವಿಭಾಗ – ಪ್ರಥಮ : ಎಂ.ಜಿ.ಎಂ ಪ.ಪೂ. ಕಾಲೇಜು
ಉಡುಪಿ,
ದ್ವಿತೀಯ : ವಿದ್ಯೋದಯ ಪ.ಪೂ. ಕಾಲೇಜು
ಉಡುಪಿ