
ಕಾಂಗ್ರೆಸ್ ಗ್ಯಾರೆಂಟಿ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಾತನಾಡಿದ್ದು ಈ ವೇಳೆ ಸರ್ಕಾರ ಈಗಾಗಲೇ ದಿವಾಳಿತನ ಆಗಿದೆ. ಸರ್ಕಾರದಲ್ಲಿ ಹಣ ಇಲ್ಲ ಆದ್ರೂ ಅವರು ಗ್ಯಾರಂಟಿಯನ್ನು ಮುಂದುವರಿಸಲು ಸಾಲ ಮಾಡಬೇಕಿದೆ. ಮಹಿಳೆಯರಿಗೆ 2 ಸಾವಿರ ರೂ. ನೀಡದೆ 3 ತಿಂಗಳು ಆಗಿದೆ. ಇನ್ನು “ಭಾಗ್ಯದ ಲಕ್ಷ್ಮಿ ಬೆಳಗಾವಿಯಲ್ಲೇ, ಲಕ್ಷ್ಮೀ ಅಕ್ಕಾ ದುಡ್ಡು ಕೊಡದ್ವಾ ಇಲ್ಲಾಂದ್ರೆ ಮನೆಗೆ ಹೋಗವ್ವಾ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ











