
ಕಳೆದ ಲೋಕಸಭೆ ಚುನಾವಣೆಯಲ್ಲಿ, ಶಿವಮೊಗ್ಗದ ಶ್ರೀ ಆದಿರಂಗನಾಥ ದೇವಸ್ಥಾನದಲ್ಲಿ ,ಜನರನ್ನು ಒಟ್ಟುಗೂಡಿಸಿ ರಾಜಕೀಯ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ .ಎಸ್. ಈಶ್ವರಪ್ಪ ಹಾಗೂ ಇತರರ ವಿರುದ್ಧ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ,ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ರಾಜಕೀಯ ಚಟುವಟಿಕೆಗಳಿಗೆ ಧಾರ್ಮಿಕ ಸಂಸ್ಥೆಗಳ ಬಳಕೆ ಸಲ್ಲದು ಇದಕ್ಕೆ ಕೊನೆ ಹಾಕಬೇಕಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್, ಏಕಸದಸ್ಯ ನ್ಯಾಯಪೀಠ ನಡೆಸಿದ್ದು, ಧಾರ್ಮಿಕ ಸಂಸ್ಥೆಗಳ ದುರ್ಬಳಕೆ ತಡೆ ಕಾಯ್ದೆ 1988 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕಾಯ್ದೆಯಡಿ ಧಾರ್ಮಿಕ ಸಂಸ್ಥೆಗಳಲ್ಲಿ ರಾಜಕೀಯ ಚಟುವಟಿಕೆಗಳ ಕುರಿತ ಸೆಕ್ಷನ್ ಗಳಿಗೆ ಸಂಬಂಧಿಸಿದಂತೆ ಎರಡು ಕಡೆಯ ವಕೀಲರು ತಮ್ಮದೇ ಆದ ಕಾನೂನು ವಿಶ್ಲೇಷಣೆಯನ್ನು ನೀಡಿದ್ದಾರೆ. ಇದೇ ವೇಳೆ ಹೈಕೋರ್ಟ್ ರಾಜಕೀಯ ಚಟುವಟಿಕೆಗಳಿಗೆ ಧಾರ್ಮಿಕ ಸಂಸ್ಥೆಗಳ ಬಳಕೆ ಸಲ್ಲದು ಎಂದು ಮೌಖಿಕವಾಗಿ ಅಭಿಪ್ರಾಯ ಪಟ್ಟಿತು.



















