
ನವದೆಹಲಿ: ರಾಜ್ಯ ವಿಧಾನ ಮಂಡಲ ಅಂಗೀಕಾರ ನೀಡಿರುವ ಮಸೂದೆಯ ವಿಚಾರವಾಗಿ ಕ್ರಮಗಳನ್ನು ಕೈಗೊಳ್ಳಲು ಸುಪ್ರೀಂಕೋರ್ಟ್ ರಾಜ್ಯಪಾಲರಿಗೆ ಸಮಯ ಮಿತಿ ನಿಗದಿ ಮಾಡಿದೆ.
ತಮಿಳುನಾಡಿನ ರಾಜ್ಯಪಾಲ ಆರ್. ಎನ್. ರವಿ ಅವರು 10 ಮಸೂದೆಗಳನ್ನು ರಾಷ್ಟ್ರಪತಿಯವರ ಪರಿಶೀಲನೆಗಾಗಿ ತಡೆಹಿಡಿದು ಇರಿಸಿಕೊಂಡಿರುವುದು ಸಂವಿಧಾನಕ್ಕೆ ವಿರುದ್ಧವಾದ ನಡೆ ಎಂದು ಸುಪ್ರೀಂ ಕೋರ್ಟ್ ಬೇಸರ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಆರ್ ಮಹಾದೇವನ್ ಅವರ ವಿಭಾಗೀಯ ಪೀಠವು 10 ಮಸೂದೆಗಳನ್ನು ರಾಷ್ಟ್ರಪತಿಯವರ ಪರಿಶೀಲನೆಗಾಗಿ ತಡೆಹಿಡಿದ ರಾಜ್ಯಪಾಲರ ಕ್ರಮವು ಅಕ್ರಮವಾಗಿದ್ದು ಈ ಕ್ರಮವನ್ನು ಅಸಿಂಧುಗೊಳಿಸಲಾಗಿದೆ. ವಿಧಾನ ಮಂಡಲದ ತೀರ್ಮಾನಕ್ಕೆ, ಜನರ ಇಚ್ಚೆಗೆ ಅಡ್ಡಿ ಉಂಟು ಮಾಡಬಾರದು ಎಂಬ ಪ್ರಜ್ಞೆ ರಾಜ್ಯಪಾಲರಿಗೆ ಇರಬೇಕು ಎಂದು ಪೀಠವು ಕಿವಿಮಾತು ನೀಡಿದೆ.





















