
ಚೆನ್ನೈ: ಶನಿವಾರ ತಮಿಳುನಾಡಿನ ಕರೂರ್ನಲ್ಲಿ ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ರ್ಯಾಲಿ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಸುಮಾರು 41 ಜನ ಮೃತಪಟ್ಟಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ.
ಇದೀಗ ಈ ವಿಚಾರವಾಗಿ ತಮಿಳುನಾಡು ಸ್ಟೂಡೆಂಟ್ಸ್ ಯೂನಿಯನ್ ವಿಜಯ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ದುರಂತಕ್ಕೆ ವಿಜಯ್ ಅವರೇ ನೇರ ಹೊಣೆಗಾರರು, ‘ರಕ್ತ ಹರಿಸಿದ ನಟ ವಿಜಯ್ ಬಂಧಿಸಬೇಕು’ ಎಂದು ಕರೂರ್ನಲ್ಲಿ ಪೋಸ್ಟರ್ಗಳನ್ನು ಅಂಟಿಸಿ, ವಿಜಯ್ ಬಂಧನಕ್ಕೆ ಆಗ್ರಹಿಸಿದ್ದಾರೆ.



















