
ಉಡುಪಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಹೆಚ್ಚಿಸಿರುವುದು ಒಟ್ಟು ₹991ರ ಏರಿಕೆಯಾಗಿದ್ದು, ಇದು ಕೇಂದ್ರ ಸರ್ಕಾರದ ಜನವಿರೋಧಿ ಕ್ರಮ ಎಂದು ತೀವ್ರವಾಗಿ ಟೀಕಿಸಿದ್ದಾರೆ.
ಇಂತಹ ಪ್ರಮಾಣದ ಬೆಲೆ ಏರಿಕೆ ಇದುವರೆಗೆ ಕಂಡಿಲ್ಲ ಎಂದು ಹೇಳಿರುವ ಅವರು ಜನತೆಗೆ ನೀಡಿದ ಭರವಸೆಗಳನ್ನು ಕಡೆಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿದರು.
ಈ ಏರಿಕೆಯಿಂದ ಹೋಟೆಲ್ ಉದ್ಯಮಕ್ಕೆ ನೇರ ಹೊಡೆತ ಬಿದ್ದು, ಆಹಾರ ಪದಾರ್ಥಗಳ ಬೆಲೆ ಹೆಚ್ಚಳದ ಮೂಲಕ ಸಾಮಾನ್ಯ ಜನರ ಮೇಲೂ ಹೆಚ್ಚುವರಿ ಭಾರ ಬೀಳಲಿದೆ. ಜನರ ಜೀವನ ಸುಲಭಗೊಳಿಸುವ ಬದಲು ಕೇಂದ್ರ ಸರ್ಕಾರ ಹೊರೆ ಹೆಚ್ಚಿಸುತ್ತಿದೆ ಎಂದು ಆರೋಪಿಸಿ, ತಕ್ಷಣವೇ ಈ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.



















