ದ್ವಿತೀಯ ಪಿಯುಸಿ ಫಲಿತಾಂಶ, ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ
ವಿದ್ಯಾರ್ಥಿಗಳ ಮತ್ತು ಶಿಕ್ಷಕರ ತಂಡದ ಎರಡು ವರ್ಷದ ಪರಿಶ್ರಮದ ಫಲ .
ಇಡೀ ವರ್ಷ ಚೆನ್ನಾಗಿ ಓದಿ ಈ ಸಾಧನೆಗೆ ಕಾರಣರಾಗಿದ್ದಾರೆ ಅಭಿನಂದನೆಗಳು.ಅಧಿಕಾರಿಗಳ ಮಟ್ಟದಲ್ಲಿ ಪ್ರಾಂಶುಪಾಲರ ಹಲವಾರು ಸಭೆಗಳನ್ನು ಮಾಡಿದ್ದೆವು.
ಶೈಕ್ಷಣಿಕ ವರ್ಷದ ಆರಂಭದಿಂದ ನಾವು ಪ್ರಥಮ ಸ್ಥಾನದ ಗುರಿಯನ್ನು ಇಟ್ಟಿದ್ದೆವು. ಡಿಡಿಪಿಯು ಮತ್ತು ಕಾಲೇಜಿನ ಶಿಕ್ಷಕರು ತಂಡವಾಗಿ ಕೆಲಸ ಮಾಡಿದ್ದಾರೆ.ಕಳೆದ ವರ್ಷದ ಫಲಿತಾಂಶದ ಮೇಲೆ ನಾವು ಸಾಕಷ್ಟು ಕೆಲಸಗಳನ್ನು ಮಾಡಿದ್ದೇವೆ. ನೋಡಲ್ ಆಫೀಸರ್ ಗಳನ್ನ ನೇಮಕ ಮಾಡಿ ಶಾಲೆಯಲ್ಲಿ ವಿಶೇಷ ತರಗತಿಗಳನ್ನು ಆರಂಭ ಮಾಡಿದ್ದೆವು.
ಹಿಂದಿನ ಐದು ವರ್ಷಗಳ ರಿಸಲ್ಟ್ ತೆಗೆದುಕೊಂಡು ಪರಾಮರ್ಶೆ ಮಾಡಿ ಕೆಲಸ ಮಾಡಿದ್ದೆವು.ಶಿಕ್ಷಕರಿಗೆ ಸಾಕಷ್ಟು ಕಟ್ಟುನಿಟ್ಟಿನ ಸೂಚನೆ ನಿರ್ದೇಶನಗಳನ್ನು ನೀಡಿದ್ದೆವು.ಜಿಲ್ಲಾ ಮಟ್ಟದಲ್ಲಿ ಮೂರು ಹಂತದ ಸಭೆ, ಡಿಡಿಪಿಯು ಪ್ರತಿ ತಿಂಗಳು ಸಭೆ ಮಾಡಿದ್ದಾರೆ.
ಜಿಲ್ಲಾ ಪಂಚಾಯತ್ ಸಿಇಓ, ಎಸ್ ಪಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪರೀಕ್ಷೆಯ ಸಂದರ್ಭ ಕೆಲಸಗಳನ್ನು ಮಾಡಿದ್ದಾರೆ.
ಶಿಕ್ಷಕರು ಪೋಷಕರು ವಿದ್ಯಾರ್ಥಿಗಳು ಶ್ರದ್ಧೆಯಿಂದ ಕೆಲಸ ಮಾಡಿರುವುದರಿಂದ ಈ ಫಲಿತಾಂಶ ಸಾಧ್ಯವಾಗಿದೆ.
ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಕ 20 ಅಂಶಗಳ ಸುತ್ತೋಲೆ ನೀಡಿತ್ತು.20 ವಂಶದ ಕಾರ್ಯಕ್ರಮವನ್ನು ಪ್ರತಿ 15 ದಿನಕ್ಕೊಮ್ಮೆ ಮೇಲ್ವಿಚಾರಣೆ ಮಾಡಲಾಗುತ್ತಿತ್ತು.ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಪೂರ್ಣ ಸಹಕಾರವನ್ನು ನೀಡಿದ್ದರು .ಸಚಿವರು ಮತ್ತು ಅರ್ಜಿ ವಹಿಸಿ ಸಾಕಷ್ಟು ನಿರ್ದೇಶನಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆ.ಸರಕಾರದ ಸುತ್ತೋಲೆಯ ಎಲ್ಲಾ ಅಂಶಗಳನ್ನು ಜಾರಿಗೆ ತಂದಿದ್ದೇವೆಮುಂದಿನ ವರ್ಷ ಕೂಡ ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಒಂದು ತಂಡವಾಗಿ ಕೆಲಸ ಮಾಡುತ್ತೇವೆ.





















