
ಶಬರಿಮಲೆ: ಕೇರಳ ಹೈಕೋರ್ಟ್ನ ವಿಭಾಗೀಯ ಪೀಠವು ಶಬರಿಮಲೆಯ ಮಾಳಿಗಪುರಂ ಕ್ಷೇತ್ರದ ಸುತ್ತುಮುತ್ತ ತೆಂಗಿನ ಕಾಯಿ ಒಡೆಯುವಿಕೆ ಮತ್ತು ಅರಶಿನ ಪುಡಿ ಸಿಂಪಡಿಸುವಿಕೆ ಶಬರಿಮಲೆ ದೇವಸ್ಥಾನದ ಸಂಪ್ರದಾಯದಲ್ಲಿ ಒಳಗೊಂಡಿಲ್ಲ ಎಂದು ಅಭಿಪ್ರಾಯಿಸಿ ಇದನ್ನು ನಿಷೇಧಿಸಿದೆ.
ಇದಲ್ಲದೆ ಮಾಳಿಗಪುರ ಪರಿಸರದಲ್ಲಿ ಕೆಲವು ಭಕ್ತರು ತಾವು ಧರಿಸಿದ ಉಡುಪುಗಳನ್ನು ಅಲ್ಲೇ ಕಳಚಿ ಉಪೇಕ್ಷಿಸಿ ಹೋಗುವುದೂ ಆಚಾರ ಕ್ರಮವಲ್ಲ. ಆದ್ದರಿಂದ ಈ ವಿಷಯವನ್ನು ಧ್ವನಿವರ್ಧಕಗಳ ಮೂಲಕ ತೀರ್ಥಾಟಕರಿಗೆ ತಿಳಿಸಬೇಕೆಂದು ಹೈಕೋರ್ಟ್ ಆದೇಶಿಸಿದೆ.



















