
ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯ ಶಿಕ್ಷಕರಾದ ಜಗದೀಶ್ ಹೆಗಡೆಯವರ ಮಾರ್ಗದರ್ಶನದಲ್ಲಿ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ. ಹಿರಿಯ ಶಿಕ್ಷಕಿ ಗೀತಾ ಭಂಡಾರಿ ಯವರು ಕನ್ನಡಾಂಬೆಯ ಭಾವಚಿತ್ರಕ್ಕೆ ದೀಪ ಬೆಳಗಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು .
ಜಗದೀಶ್ ಹೆಗ್ಡೆಯವರ ಈ ದಿನದ ವಿಶೇಷತೆಯ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡ ನಾಡು-ನುಡಿಯ ಬಗ್ಗೆ ಮಾತನಾಡಿದರು. ಹಾಗೂ ನಾಡ ಗೀತೆಯನ್ನು ಹಾಡಿದರು. ಸಹ ಶಿಕ್ಷಕ ಉಮೇಶ್ ರವರು ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಶಿಕ್ಷಕಿ ಅನಿತಾ ರವರು ಎಲ್ಲರಿಗೂ ಧನ್ಯವಾದ ನೀಡಿದರು.






















































