
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಣೂರು ವಲಯದ ವತಿಯಿಂದ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಸಾಣೂರಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಡಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆನ್ಲೈನ್ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಯುವರಾಜ್ ಜೈನ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಾಧವ ಭಂಡಾರ್ಕರ್, ಯೋಜನೆಯ ಮೇಲ್ವಿಚಾರಕಿ ಸುಶೀಲ, ಸೇವಾ ಪ್ರತಿನಿಧಿ ಅರುಣಿ, ಶಾಲೆಯ ಹಿರಿಯ ಶಿಕ್ಷಕಿ ಲವೀನಾ ಮೆಲಿಟ್ಟ ನೋರೋನ್ಹ ಹಾಗೂ ಶಿಕ್ಷಕರಾದ ವಿಮಲಾ, ಅನಿತಾ, ರೀಟಾ ರೋಜಾರಿಯೋ, ಪ್ರಕಾಶ್, ರಾಜೀವ ಶೆಟ್ಟಿ ಎಂ., ಹರಿಣಾಕ್ಷಿ, ಶೌರ್ಯ ಸ್ವಯಂಸೇವಕರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








































