
ನವದೆಹಲಿ: ಜನರ ಸುರಕ್ಷತೆಯ ದೃಷ್ಟಿಯಿಂದ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯವೊಂದನ್ನು ವ್ಯಕ್ತಪಡಿಸಿದೆ.
ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗ, ಜಲಮೂಲ ಅಥವಾ ರೈಲ್ವೆ ಹಳಿಯ ಬಳಿ ಯಾವುದೇ ರೀತಿಯ ಧಾರ್ಮಿಕ ಕೇಂದ್ರಗಳು ಕಟ್ಟಡಗಳು ಇರುವಂತಿಲ್ಲ. ಹೀಗಾಗಿ ಇಂತಹ ಒತ್ತುವರಿಗಳನ್ನು ತೆರವುಗೊಳಿಸುವ ಸಂದರ್ಭ ಯಾವುದೇ ಧರ್ಮ ಎಂದು ಪ್ರತ್ಯೇಕಿಸದೆ ಎಲ್ಲಾ ನಾಗರಿಕರಿಗೂ ಈ ಆದೇಶ ಅನ್ವಯವಾಗುತ್ತದೆ. ಯಾವುದೇ ಗುರುದ್ವಾರ ಅಥವಾ ದರ್ಗಾ ಅಥವಾ ಯಾವುದೇ ದೇಗುಲಗಳಿಗೆ ಈ ನಿಯಮ ಅನ್ವಯಿಸುತ್ತದೆ. ಜನರ ಸುರಕ್ಷತೆಯ ದೃಷ್ಟಿಯಿಂದ ಒತ್ತುವಾರಿ ತೆರವು ಸಂಬಂಧ ಈ ಮಾರ್ಗಸೂಚಿ ಹೊರಡಿಸುವುದಾಗಿ ತಿಳಿಸಿದೆ.













